Connect with us

    LATEST NEWS

    ಎಲ್ಲರಿಗೂ ಹಲಾಲ್ ಮಾಂಸ ತಿನ್ನಿಸುವ ಭಾವನೆ ಸರಿಯಲ್ಲ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

    ಉಡುಪಿ ಎಪ್ರಿಲ್ 03 : ಎಲ್ಲರಿಗೂ ಹಲಾಲ್ ಮಾಂಸ ತಿನ್ನಿಸುವ ಭಾವನೆ ಸರಿಯಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ.

    ಉಡುಪಿಯಲ್ಲಿ ಮಾತನಾಡಿದ ಅವರು ಮುಸಲ್ಮಾನರು ಹಲಾಲ್ ಮಾಂಸ ತಿನ್ನುವುದಕ್ಕೆ ನಮ್ಮದೇನು ವಿರೋಧ ಇಲ್ಲ. ಹಲಾಲ್ ಒಂದು ಧರ್ಮದ ವಿಚಾರ. ನಾವು ಹಲಾಲ್ ಇಲ್ಲದೇ ತಿನ್ನುತ್ತಾ ಬೆಳೆದವರು ಎಂದ ಅವರು, ಹಿಂದೂಗಳು ಹಲಾಲ್ ತಿನ್ನಬೇಕು ಎಂಬುದು ಸರಿಯಲ್ಲ. ಜೊತೆಗೆ ಎಲ್ಲರೂ ಹಲಾಲ್ ಸರ್ಟಿಫಿಕೇಟ್ ಪಡೆಯಬೇಕೆಂಬ ನಿರ್ದೇಶನ ಜಾಸ್ತಿಯಾಗುತ್ತಿದೆ. ಇದು ಸರಿಯಲ್ಲ ಎಂದರು.

    ಹಿಂದುತ್ವದ ಅಸ್ತ್ರ ಬಳಸಿ ಬಿಜೆಪಿ 150 ಸೀಟುಗೆಲ್ಲಲಿದೆ ಎಂಬ ಕಾಂಗ್ರೆಸ್, ಜೆಡಿಎಸ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್-ಜೆಡಿಎಸ್‍ನವರು ಜನರನ್ನು ವೋಟ್ ಬ್ಯಾಂಕ್ ಎಂದುಕೊಂಡಿದ್ದಾರೆ. ಅಂದಿನಿಂದ ಇಂದಿನವರೆಗೆ ಮತದ ಆಧಾರದಲ್ಲಿ ದೇಶವನ್ನು ವಿಭಜನೆ ಮಾಡಿದ್ದಾರೆ. ದೇಶದ ಜನ ಎರಡು ಪಕ್ಷಗಳಿಗೆ ತಕ್ಕ ಶಾಸ್ತಿ ಮಾಡಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಎಲ್ಲಿ ಎಂಬುದನ್ನು ಟಾರ್ಚ್ ಲೈಟ್ ಹಾಕಿ ಹುಡುಕುವ ಪರಿಸ್ಥಿತಿ ಇದೆ. ಕಾಂಗ್ರೆಸ್ ತನ್ನ ಮಾನಸಿಕತೆಯನ್ನು ಈಗಲಾದರೂ ಬದಲಾಯಿಸಿಕೊಳ್ಳಬೇಕು ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply