Connect with us

    LATEST NEWS

    ಶೋಭಾ ಕರಂದ್ಲಾಜೆ ನನ್ನ ಮನೆಗೆ ಬಂದರೆ ಭಿಕ್ಷೆ ಹಾಕುತ್ತೇನೆ : ಸಚಿವ ಖಾದರ್

    ಮಂಗಳೂರು, ಆಗಸ್ಟ್ 18: ಕಲ್ಲಡ್ಕ ಶಾಲೆಯ ಮಕ್ಕಳಿಗಾಗಿ ಸಂಸದೆ ಶೋಭಾ ಕರಂದ್ಲಾಜೆ ಆರಂಭಿಸಿರುವ ಅಕ್ಕಿ ಭಿಕ್ಷೆ ಕೇವಲ ಒಂದು ದಿನಕ್ಕೆ ಮತ್ತು ಪೋಟೊ ಫೋಸಿಗೆ ಮಾತ್ರ ಸೀಮಿತವಾಗ ಬಾರದು, ಪ್ರತಿದಿನ ಜೋಳಿಗೆ ಹಾಕಿ ಅವರು ಬೆಳಗ್ಗೆದ್ದು ಹೋದರೂ ಸಂತೋಷ, ನನ್ನ ಮನೆಗೆ ಬಂದರೂ ಅವರಿಗೆ ಭಿಕ್ಷೆ ಹಾಕುತ್ತೇನೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು ಟಿ ಖಾದರ್ ವ್ಯಂಗ್ಯವಾಡಿದ್ದಾರೆ.

    ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕರ್ನಾಟಕದ ಎರಡು ಶಾಲೆಗಳಿಗೆ ಅನುದಾನ ಕಡಿತ ಮಾಡಿರುವುದು ಮುಜರಾಯಿ ಕಾನೂನಿನ ಪ್ರಕಾರವೇ ಮಾಡಲಾಗಿದೆ, ಆದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಅವರು ಸಮರ್ಥಿಸಿಕೊಂಡರು. ಪ್ರತಿಯೊಂದಕ್ಕೂ ಮುಖ್ಯಮಂತ್ರಿಯವರೇ ಕಾರಣ ಎಂದು ಹೇಳುವುದು ಸರಿಯಲ್ಲ.

    ಮುಖ್ಯಮಂತ್ರಿಯವರ ಜನಪ್ರಿಯತೆಗೆ ಹೆದರಿ ಈ ರೀತಿಯ ಹೇಳಿಕೆಗಳು ಬಿಜೆಪಿ ಕಡೆಯಿಂದ ಬರುತ್ತಿವೆ ಎಂದು  ಹೇಳಿದರು. ಕಲ್ಲಡ್ಕದ ಶಾಲಾ ಮಕ್ಕಳಿಗಾಗಿ ಸಂಸದೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದ ಅಕ್ಕಿ ಭಿಕ್ಷೆ ಅಭಿಯಾನದ ಕುರಿತು ಪ್ರತಿಕ್ರಿಯಿಸಿದ ಖಾದರ್ ಅಕ್ಕಿ ಭಿಕ್ಷೆಗೆ ಹೋಗುವುದು ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು ಜೋಳಿಗೆ ಹಾಕಿ ದಿನಾಲು ಬೆಳಗ್ಗೆದ್ದು ಹೋದರೆ ಸಂತೋಷ ತನ್ನ ಮನೆಗೆ ಬಂದರೂ ಕೈಲಾದಷ್ಟು ಕೊಡುತ್ತೇನೆ ಎಂದು ವ್ಯಂಗ್ಯವಾಡಿದರು .

    ರಾಜ್ಯದಾದ್ಯಂತ ಇಂದು ಚೀನಾ ದೇಶದಲ್ಲಿ ತಯಾರಾಗಿರುವ ಅನಧಿಕೃತ ಹಾಗೂ ಇಲಾಖೆಯ ಮಾನ್ಯತೆ ಇಲ್ಲದ ತೂಕ ಯಂತ್ರಗಳಿಂದ ಮೋಸ ಹೋದ ಪ್ರಕರಣಗಳ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಈ ದಾಳಿ ಆರಂಭಿಸಲಾಗಿದೆ. ಅನಧಿಕೃತ ತೂಕ ಯಂತ್ರದ ಬಳಕೆ ಮಾಡುವವರ ಮೇಲೆ ದಾಳಿ ನಡೆಸಲಾಗಿದೆ ಎಂದು ಹೇಳಿದ ಅವರು  ಈವರೆಗೆ 394 ಕಡೆ ಮಾಲ್ , ಸೂಪರ್ ಮಾರ್ಕೆಟ್ , ಮತ್ತು ವಿವಿಧ ಅಂಗಡಿಗಳ ಮೇಲೆ ತೂಕ ಮತ್ತು ಕಾನೂನು ಮಾಪನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ರಾಜ್ಯಾದ್ಯಂತ ಒಟ್ಟು ಎಪ್ಪತ್ತೊಂದು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಇದೇ ಸಂದರ್ಭದಲ್ಲಿ ಮಿಸೆಸ್ ಇಂಡಿಯಾ ವಲ್ಡ್ ವೈಡ್ ಸೌಂದರ್ಯ ಸ್ಪರ್ಧೆಯಲ್ಲಿ 7 ನೇ ಸ್ಥಾನ ಪಡೆದ ಮಂಗಳೂರಿನ ಮಹಿಳೆ ಸೌಜನ್ಯ ಹೆಗ್ಡೆ ಅವರನ್ನು ಸಚಿವರು ಸನ್ಮಾನಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply