Connect with us

LATEST NEWS

ಉಡುಪಿ ನ್ಯಾಯಾಲಯದಲ್ಲಿ ಶೂ ಎಸೆದ ಅತ್ಯಾಚಾರಿ ಆರೋಪಿ

ಉಡುಪಿ ನ್ಯಾಯಾಲಯದಲ್ಲಿ ಶೂ ಎಸೆದ ಅತ್ಯಾಚಾರಿ ಆರೋಪಿ

ಉಡುಪಿ, ಎಪ್ರಿಲ್ 14 :  ಅತ್ಯಾಚಾರ ಪ್ರಕರಣದ ಆರೋಪಿಯೊಬ್ಬ ಉಡುಪಿಯ ಪೋಕ್ಸೋ ನ್ಯಾಯಾಲಯದಲ್ಲಿ ನ್ಯಾಯಾಧೀಶ ಸಮ್ಮುಖದಲ್ಲಿಯೇ ಶೂ ಎಸೆದ ಕಳವಳಕಾರಿ ಘಟನೆ ನಡೆದಿದೆ.

ಐದು ವರ್ಷಗಳ ಹಿಂದೆ ಕುಂದಾಪುರ ತಾಲೂಕಿನಲ್ಲಿ ಹದಿನೈದರ ಅಪ್ರಾಪ್ತ ತರುಣಿ ಮೇಲೆ ಅತ್ಯಾಚಾರ ನೆಡೆದಿತ್ತು.

ಬಳಿಕ ತನಿಖೆಯಿಂದ ಆರೋಪಿ ಬ್ರಹ್ಮಾವರದ ಪ್ರಶಾಂತ ಕುಲಾಲ್ ಎಂದು ಪತ್ತೆಯಾಗಿತ್ತು.

ಈತನನ್ನು ಬಂಧಿಸಲಾಗಿತ್ತು, ಬಳಿಕ ಜಾಮೀನಿನಿಂದ ಈತ ಬಿಡುಗಡೆ ಹೊಂದಿದ್ದು ವಿಚಾರಣೆ ನಡೆಯುತ್ತಿತ್ತು.

ಆ ಬಳಿಕವೂ ಈತ ಒಂದು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ.

ಗುರುವಾರ ಸಂಜೆ ಅಪ್ರಾಪ್ತೆಯ ಅತ್ಯಾಚಾರ ಪ್ರಕರಣದ ತೀರ್ಪು ಹೊರಬೀಳಬೇಕಿತ್ತು.

ಈ ವೇಳೆ ಈತನ ಅಪರಾಧಿ ಹಿನ್ನೆಲೆಯನ್ನು ಉಲ್ಲೇಖಿಸಿದ ವಿಶೇಷ ಸರ್ಕಾರಿ ಅಭಿಯೋಜಕ ವಿಜಯ ರಾಜು ಪೂಜಾರಿ ಅವರು ಈತನಿಗೆ ಕಠಿಣ ಶಿಕ್ಷೆ ನೀಡುವಂತೆ ವಾಧಿಸಿದ್ದರು.

ಬಳಿಕ ತೀರ್ಪು ನೀಡಿದ ನ್ಯಾಯಾಧೀಶರು ಇಪ್ಪತ್ತು ವರ್ಷ ಜೈಲು ಹಾಗೂ 25 ಸಾವಿರ ದಂಡ ವಿಧಿಸಿದ್ದರು.

ತೀರ್ಪು ಪ್ರಕಟವಾಗುತ್ತಿದ್ದಂತೆ ಕೋಪಗೊಂಡ ಪ್ರಶಾಂತ ತನ್ನ ಎರಡೂ ಕಾಲುಗಳ ಶೂ ತೆಗೆದು ನ್ಯಾಯಾಧೀಶ ರ ಸಮ್ಮುಖ ಇದ್ದ ವಿಶೇಶ ಸರ್ಕಾರಿ ಅಭಿಯೋಜಕ ವಿಜಯ ರಾಜು ಪೂಜಾರಿಯತ್ತ ಎಸೆದಿದ್ದಾನೆ.

ಅವರು ಅದೃಷ್ಡವಷಾತ್ ಏಟಿನಿಂದ ತಪ್ಪಿಸಿಕೊಂಡಿದ್ದು, ಇದು ನ್ಯಾಯಾಲಯವನ್ನು ಅವಮಾನಿಸಿದ ಪ್ರಕರಣವಾಗಿದೆ.

ಪ್ರಶಾಂತನ ವಿರುದ್ದ ಈ ಬಗ್ಗೆ ಶುಕ್ರವಾರ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಗೂ ಕೋರಿಕೆಯ ಮೇರೆಗೆ ವಿಜಯ ರಾಜು ಪೂಜಾರಿ ಅವರಿಗೆ ಭದ್ರತೆ ನೀಡಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *