Connect with us

LATEST NEWS

ಸಂಸದೆ ಶೋಭಾ ಕರಂದ್ಲಾಜೆ ಗೆ ಬಿಎಸ್ ವೈ ಸಪೋರ್ಟ್.. ಈ ಬಾರಿ ಹೆಚ್ಚಿನ ಅಂತರದಲ್ಲಿ ಗೆಲವು…!!

ಚಿಕ್ಕಮಗಳೂರು ಫೆಬ್ರವರಿ 25: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಗಲಾಟೆಗಳಿಗೆ ಇದೀಗ ಬಿ.ಎಸ್ ಯಡಿಯೂರಪ್ಪ ಪುಲ್ ಸ್ಟಾಪ್ ಇಟ್ಟಿದ್ದು, ಈ ಬಾರಿ ಮತ್ತೆ ಸಂಸದೆ ಹಾಗೂ ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರೇ ಅಭ್ಯರ್ಥಿ, ಅಲ್ಲದೆ ಕಳೆದ ಬಾರಿಗಿಂತ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.


ಖಾಸಗಿ ಕಾರ್ಯಕ್ರಮದ ನಿಮಿತ್ತ ಚಿಕ್ಕಮಗಳೂರಿಗೆ ಆಗಮಿಸಿದ್ದ ಅವರು ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ಈ ಬಾರಿ ಶೋಭಾ ಕರಂದ್ಲಾಜೆ ಗೆದ್ದೇ ಗೆಲ್ಲುತ್ತಾರೆ. ಅದರ ಬಗ್ಗೆ ಯಾವುದೇ ಅನುಮಾನ ಬೇಡ.
ರಾಜ್ಯದಲ್ಲೂ ಕೂಡ ಅದೇ ವಾತಾವರಣವಿದೆ. ಶೋಭಾ ಕರಂದ್ಲಾಜೆ ವಿರುದ್ಧದ ಪಿತೂರಿ ಅದೊಂದು ಷಡ್ಯಂತ್ರ. ಅದನ್ನು ಯಾರು ಮಾಡಿಸುತ್ತಿದ್ದಾರೆ ಎಂಬುದು ಗೊತ್ತಿದೆ. ಆದರೆ ಅವರು ಯಾವುದಕ್ಕೂ ಧೃತಿಗೆಡಲ್ಲ. ಕೇಂದ್ರ ಸಚಿವೆಯಾಗಿ ಅವರು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *