LATEST NEWS
ಶ್ರೀಗಣೇಶ್ ಆ್ಯಂಬುಲೆನ್ಸ್ ಮಾಲಕ ಗಂಗಾಧರ ಅತ್ತಾವರ ನಿಧನ
ಮಂಗಳೂರು ಡಿಸೆಂಬರ್ 23:ಶ್ರೀಗಣೇಶ್ ಆ್ಯಂಬುಲೆನ್ಸ್ ಮಾಲಕರಾದ ಗಂಗಾಧರ ಅತ್ತಾವರ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಅವರಿಗೆ 62 ವರ್ಷ ವಯಸ್ಸಾಗಿತ್ತು. ಕಳೆದ ಮೂರು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ನಗರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕಳೆ ದ ರಾತ್ರಿ 12:30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಕೇವಲ ಒಂದು ಆ್ಯಂಬುಲೆನ್ಸ್ ಮೂಲಕ ಶ್ರೀ ಗಣೇಶ್ ಆ್ಯಂಬುಲೆನ್ಸ್ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದ ಗಂಗಾಧರ ಅವರು 35 ವರ್ಷಗಳಲ್ಲಿ 18ಕ್ಕೂ ಅಧಿಕ ಆ್ಯಂಬುಲೆನ್ಸ್ ಗಳನ್ನು ಹೊಂದಿದ್ದರು. ಅನೇಕ ಚಾಲಕರಿಗೆ ಉದ್ಯೋಗ ನೀಡಿದ್ದರು. ಕೋವಿಡ್ 19 ಸಂದರ್ಭ ಸಮಾರೋಪಾದಿಯಲ್ಲಿ ಸೇವೆ ಸಲ್ಲಿಸಿ ಗಮನ ಸೆಳೆದಿದ್ದರು.
You must be logged in to post a comment Login