Connect with us

    LATEST NEWS

    ತೀರಾ ಗಂಭೀರ ಪರಿಸ್ಥಿತಿಯಲ್ಲಿ ಪೇಜಾವರ ಶ್ರೀಗಳ ಆರೋಗ್ಯ ಗಣ್ಯರ ಭೇಟಿಗೆ ನಿರ್ಬಂಧ ಸಾಧ್ಯತೆ

    ತೀರಾ ಗಂಭೀರ ಪರಿಸ್ಥಿತಿಯಲ್ಲಿ ಪೇಜಾವರ ಶ್ರೀಗಳ ಆರೋಗ್ಯ ಗಣ್ಯರ ಭೇಟಿಗೆ ನಿರ್ಬಂಧ ಸಾಧ್ಯತೆ

    ಉಡುಪಿ ಡಿಸೆಂಬರ್ 28: ಉಸಿರಾಟದ ತೊಂದರೆಯಿಂದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿರುವ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಗಳ ಆರೋಗ್ಯ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು, ಪೇಜಾವರ ಶ್ರೀಗಳ ಆರೋಗ್ಯ ತೀರಾ ಗಂಭೀರ ಸ್ಥಿತಿಯಲ್ಲಿದೆ ಎಂದು ಮಣಿಪಾಲ ವೈದ್ಯರು ತಿಳಿಸಿದ್ದು, ಇಂದಿನಿಂದ ಶ್ರೀಗಳ ಭೇಟಿಗೆ ಅವಕಾಶ ನೀಡದಿರಲು ವೈದ್ಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

    ಪೇಜಾವರ ಶ್ರೀಗಳು ಆಸ್ಪತ್ರೆಗೆ ದಾಖಲಾದ ದಿನದಿಂದ ಪ್ರತಿನಿತ್ಯ ಗಣ್ಯರು ಭೇಟಿ ನೀಡುತ್ತಿರುವುದರಿಂದ ಚಿಕಿತ್ಸೆಗೆ ಅಡ್ಡಿಯಾಗುತ್ತಿದೆ. ಪ್ರತೀ ಸಲ ಗಣ್ಯರು ಭೇಟಿಗೆ ಬಂದಾಗ ಐಸಿಯೂ ಬಾಗಿಲು ತೆರೆಯಬೇಕಾಗುತ್ತದೆ. ಹಾಗಾಗಿ ಇಂದಿನಿಂದ ಯಾವುದೇ ಗಣ್ಯರಿಗೆ ಸ್ವಾಮೀಜಿಗಳ ಭೇಟಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

    ಇಂದು ಮುಂಜಾನೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿ ಸ್ವಾಮೀಜಿಗಳ ಯೋಗಕ್ಷೇಮ ವಿಚಾರಿಸಿದರು.
    ಪೇಜಾವರಶ್ರೀಗಳನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಪೇಜಾವರ ಶ್ರೀಗಳು ಮಗುವಿನಂತೆ ಓಡಾಡುವುದನ್ನು ಕಂಡ ನನಗೆ ಈಗ ಮಲಗಿದ್ದನ್ನು ಕಂಡು ಬೇಸರವಾಗಿದೆ. ಶ್ರೀಗಳು ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಸ್ವಾಮೀಜಿ ಮಲಗಿರೋದನ್ನು ನಾವು ಯಾವತ್ತೂ ನೋಡಿಲ್ಲ. ವಿಶ್ವೇಶತೀರ್ಥರು ಮಗುವಿನಂತೆ ಓಡಾಡುವ ಸ್ವಾಮೀಜಿ. ಮಗುವಿನಂತಹ ಮುಗ್ಧತೆ, ಅದಮ್ಯ ಚೈತನ್ಯದವರು. ಸ್ವಾಮೀಜಿ ಮತ್ತಷ್ಟು ಧರ್ಮದ ಕೆಲಸ ಮಾಡುವಂತಾಗಲಿ. ವೈದ್ಯರ ಜೊತೆ ಮಾತನಾಡಿದ್ದೇನೆ. ಗುಣಮುಖರಾಗುವ ನಂಬಿಕೆಯಿದೆ ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply