Connect with us

    BELTHANGADI

    ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಪ್ರಧಾನ ಕಚೇರಿಗೆ ನಟಿ ಶೃತಿ ಭೇಟಿ

    ಬೆಳ್ತಂಗಡಿ ನವೆಂಬರ್ 15: ಬೆಳ್ತಂಗಡಿ ತಾಲೂಕಿನ ಉಜಿರೆಯ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಪ್ರಧಾನ ಕಚೇರಿಗೆ ಇಂದು ಕನ್ನಡ ಚಿತ್ರರಂಗದ ಹಿರಿಯ ನಟಿ ಶೃತಿ ಭೇಟಿ ನೀಡಿದರು.


    ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಸ್ ಜನಾರ್ಧನ ಅವರು ಚಿತ್ರನಟಿ ಶೃತಿಯವರನ್ನು ಸ್ವಾಗತಿಸಿ, ಸಿರಿ ಸಂಸ್ಥೆಯ ಬಗ್ಗೆ ಪ್ರಾಸ್ತಾವಿಕವಾಗಿ ಪರಿಚಯಿಸಿ ಸನ್ಮಾನ ನೀಡಿ ಗೌರವಿಸಿದರು.

    ಇನ್ನು ನಟಿ ಶೃತಿ ಅವರು ಮಾತನಾಡಿ ‘ಪೂಜ್ಯ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ಅಮ್ಮನವರ ಕನಸಿನ ಕೂಸಾಗಿರುವ ಈ ಸಂಸ್ಥೆಯಲ್ಲಿ ಅನೇಕ ಮಹಿಳೆಯರು ಉದ್ಯೋಗ ನಡೆಸುತ್ತಾ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳುತ್ತಿದ್ದಾರೆ. ಇನ್ನೂ ಇಂತಹ ಸಹಸ್ರಾರು ಮಹಿಳೆಯರ ಬಾಳು ಹಸನಾಗಲಿ’ ಎಂದು ಹಾರೈಸಿದರು.

     

    Share Information
    Advertisement
    Click to comment

    You must be logged in to post a comment Login

    Leave a Reply