Connect with us

LATEST NEWS

ಶ್ಯಾಮಶಾಸ್ತ್ರೀ ಆತ್ಮಹತ್ಯೆ ಪ್ರಕರಣ- ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ವಾರೆಂಟ್ ಜಾರಿ

ಶ್ಯಾಮಶಾಸ್ತ್ರೀ ಆತ್ಮಹತ್ಯೆ ಪ್ರಕರಣ- ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ವಾರೆಂಟ್ ಜಾರಿ

ಪುತ್ತೂರು ಅಕ್ಟೋಬರ್ 5: ಕೆದಿಲ ನಿವಾಸಿ ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಎಸ್.ಎಸ್ ಮುಖಂಡ ಪ್ರಭಾಕರ್ ಭಟ್ ವಿರುದ್ಧ ಪುತ್ತೂರಿನ ಹಿರಿಯ ವ್ಯಾವಹಾರಿಕ ನ್ಯಾಯಾಲಯ ವಾರೆಂಟ್ ಜಾರಿ ಮಾಡಿದೆ.

ಕೆದಿಲ ನಿವಾಸಿ ಶ್ಯಾಮ್ ಪ್ರಸಾದ್ ಶಾಸ್ತ್ರಿ ಆತ್ಮಹತ್ಯೆ ಪ್ರಕರಣದ ದೋಷರೋಪಣಾ ಪಟ್ಟಿಯ ಆಧಾರದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಬೋನಂತಾಯ ಶಿವಶಂಕರ ಭಟ್ ಅವರಿಗೆ ಪುತ್ತೂರು ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯ ಶುಕ್ರವಾರ ವಾರಂಟ್ ಜಾರಿಗೊಳಿಸಿದೆ.

ಪ್ರಕರಣದ ಇನ್ನೋರ್ವ ಆರೋಪಿ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗೆ ಸಮನ್ಸ್ ಜಾರಿಗೊಳಿಸಿದೆ.
ಆತ್ಮಹತ್ಯೆ ಮಾಡಿಕೊಂಡಿದ್ದ ಶ್ಯಾಮ್ ಪ್ರಸಾದ್ ಶಾಸ್ತ್ರಿ ಪತ್ನಿಯಿಂದ ಈ ಮೂವರ ಮೇಲೆ ಆತ್ಮಹತ್ಯೆ ಗೆ ಪ್ರೇರಣೆ ಕೇಸು ದಾಖಲಿಸಿದ್ದರು.
ಈ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 31ರಂದು ನ್ಯಾಯಾಲಯ ನಡೆಸಲಿದ್ದು, ಆ ದಿನ ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *