LATEST NEWS
ಸಿದ್ಧಾಪುರ – ಹೆಬ್ರಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ

ಉಡುಪಿ, ಜೂನ್ 27 : ಜಿಲ್ಲೆಯ ಹೆಬ್ರಿ ತಾಲೂಕಿನ ಸಿದ್ಧಾಪುರ-ಹೆಬ್ರಿ ರಾಜ್ಯ ಹೆದ್ದಾರಿ 296 ರ ಕಿ.ಮೀ 60.50 ರಲ್ಲಿ ಅತಿಯಾದ ಮಳೆಯಿಂದ ಹಾನಿಗೊಂಡ ರಸ್ತೆ ಹಾಗೂ ಮೋರಿಯನ್ನು ರಕ್ಷಣಾ ತಡೆಗೋಡೆಯೊಂದಿಗೆ ಪುನರ್ ನಿರ್ಮಿಸುವ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆ ಜೂನ್ 27 ರಿಂದ ಜುಲೈ 30 ರ ವರೆಗೆ ಹೆಬ್ರಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.
ಈ ಕುರಿತಂತೆ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ಸಾರ್ವಜನಿಕ ಹಿತದೃಷ್ಠಿಯಿಂದ ಕಾಮಗಾರಿಯು ಸುಸೂತ್ರವಾಗಿ ನಡೆಸುವ ಸಲುವಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ)(2) (5) ರನ್ವಯ ಜೂನ್ 27 ರಿಂದ ಜುಲೈ 30 ರ ವರೆಗೆ ಸಿದ್ಧಾಪುರ-ಹೆಬ್ರಿ (ಹೆಬ್ರಿ-ಕುಚ್ಚೂರು-ಕಂಚರಕಾಳ-ಮಾಂಡಿಮೂರಕೈ) ರಾಜ್ಯ ಹೆದ್ದಾರಿಯ ಮಾರ್ಗದಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ, ಸದರಿ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗವಾಗಿ ಗ್ರಾಮೀಣ ರಸ್ತೆಯಾದ ಮಾಂಡಿ ಮೂರುಕೈ-ಮೀನುಗದ್ದೆ-ಬೇಳಂಜೆ-ಕುಚ್ಚೂರು-ಹೆಬ್ರಿ ರಸ್ತೆ ಮೂಲಕ ಸಂಚರಿಸುವಂತೆ ಆದೇಶಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.
