Connect with us

    LATEST NEWS

    ಪಂಜಾಬ್ ಗಾಯಕನನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

    ಪಂಜಾಬ್ ಮೇ 29: ಪಂಜಾಬ್ ನ ಖ್ಯಾತ ಗಾಯಕ ನನ್ನು ಹಾಡುಹಗಲೇ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.


    ಪಂಜಾಬಿನ ಕಾಂಗ್ರೆಸ್ ಮುಖಂಡರು ಹಾಗೂ ಪ್ರತಿಭಾವಂತ ಗಾಯಕರಾಗಿದ್ದ ಸಿಧು ಮೂಸೆವಾಲ ಅವರನ್ನು ಮಾನ್ಸಾ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಪೈರಿಂಗ್ ಮಾಡಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿದ್ದ ಸಿಧು ಸೇರಿದಂತೆ ಕಾರಿನಲ್ಲಿ ಮೂವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ, ಮೂವರಲ್ಲಿ ಸಿಧು ಮೃತಪಟ್ಟಿರುವುದಾಗಿ ಮಾನ್ಸಾ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ. ರಂಜೀತ್ ರೈ ತಿಳಿಸಿದ್ದಾರೆ.

    ಇಬ್ಬರು ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ಸಂಸ್ಥೆಗೆ ಸೇರಿಸಲು ಶಿಫಾರಸು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply