Connect with us

FILM

ಕೋಲ್ಕತ್ತಾದಲ್ಲಿ ಲೈವ್ ಶೋನಲ್ಲೇ ಗಾಯಕ ಕೆಕೆ ದುರಂತ ಸಾವು

ಕೋಲ್ಕತ್ತಾ, ಜೂನ್ 01: ಜನಪ್ರಿಯ ಗಾಯಕ ಕೃಷ್ಣಕುಮಾರ್ ಕುನ್ನತ್ ಗಾಯನ ಜೀವನ ಇಂದು ಕೋಲ್ಕತ್ತಾದ ನಜ್ರುಲ್ ಮಂಚ್‌ನಲ್ಲಿ ಕಾರ್ಯಕ್ರಮ ನೀಡುತ್ತಿದ್ದ ಗಾಯಕ ಕೆಕೆ, ಸ್ಟೇಜ್ ಮೇಲೆ ಅಸುನೀಗಿರುವ ದುರಂತ ಘಟನೆ ನಡೆದಿದೆ.

ಕೆಕೆ ನಿಧನಕ್ಕೆ ಸಂಗೀತ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಗಾಯನ ವೇದಿಕೆಯಲ್ಲೇ ಉಸಿರು ನಿಲ್ಲಿಸಿದ್ದನ್ನು ಅಭಿಮಾನಿಗಳು ಸ್ಮರಿಸಿ ಆಘಾತ ಸಂತಾಪ ವ್ಯಕ್ತಪಡಿಸಿದ್ದಾರೆ. ಕೋಲ್ಕತ್ತಾದ ವಿವೇಕಾನಂದ ಕಾಲೇಜಿನ ಕಾರ್ಯಕ್ರಮದ ಭಾಗವಾಗಿ ನಜ್ರುಲ್ ಮಂಚ್‌ನಲ್ಲಿ ಲೈವ್ ಸಂಗೀತ ಸಂಜೆಯಲ್ಲಿ ಕೆಕೆ ಪಾಲ್ಗೊಂಡಿದ್ದರು. ಗಾಯನದ ನಡುವೆ ಅಸ್ವಸ್ಥರಾಗಿ ಕುಸಿದ ಗಾಯಕ ಕೆಕೆರನ್ನು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು.

ಕೋಲ್ಕತ್ತಾದ ನಜ್ರುಲ್ ಮಂಚದಲ್ಲಿ ಲೈವ್ ಶೋ ನಡೆಯುತ್ತಿತ್ತು. ಅಲ್ಲಿಯೇ ಅಪಘಾತ ಸಂಭವಿಸಿದೆ. ಹಾಡಿನ ಕಾರ್ಯಕ್ರಮದ ವೇಳೆ ಖ್ಯಾತ ಗಾಯಕ ಕೃಷ್ಣಕುಮಾರ್ ಕುನ್ನತ್ ಅಲಿಯಾಸ್ ಕೆಕೆ ನಿಧನರಾಗಿದ್ದಾರೆ. ಇದು ಠಾಕೂರ್ಪುಕೂರ್ ವಿವೇಕಾನಂದ ಕಾಲೇಜು ಆಯೋಜಿಸಿದ್ದ ಉತ್ಸವವಾಗಿತ್ತು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *