Connect with us

    BANTWAL

    ಪೆಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡು ಅಣ್ಣ- ತಂಗಿ ಆತ್ಮಹತ್ಯೆ

    ಬಂಟ್ವಾಳ ಜೂನ್ 16: ಅವಿವಾಹಿತ ಅಣ್ಣ- ತಂಗಿ ಇಬ್ಬರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಗೈದ ಘಟನೆ ಸೋಮವಾರ ರಾತ್ರಿ ಬಂಟ್ವಾಳ ತಾಲೂಕಿನ ಸಂಗಬೆಟ್ಟುವಿನಲ್ಲಿ ಸಂಭವಿಸಿದೆ.

    ಮೃತರನ್ನ ನೀಲಯ್ಯ ಶೆಟ್ಟಿ ಗಾರ್(42) , ಕೇಸರಿ ( 39) ಎಂದು ಗುರುತಿಸಲಾಗಿದೆ. ಇಬ್ಬರೂ ಅನಾರೋಗ್ಯ ದಿಂದ ಬಳಲುತ್ತಿದ್ದು, ರಾತ್ರಿ ಸುಮಾರು 11 ಗಂಟೆಯ ಬಳಿಕ ತಮ್ಮ ಮನೆಯ ಕೊಠಡಿಯಲ್ಲಿ ಕೃತ್ಯ ಗೈದಿದ್ದಾರೆ. ಮನೆಯಲ್ಲಿ ನೀಲಯ್ಯ ಅವರ ಸಹೋದರ ಮತ್ತು ಅವರ ಪತ್ನಿ, ಮಗ ವಾಸವಿದ್ದು, ಮತ್ತೊಂದು ಕೊಠಡಿಯಲ್ಲಿ ಮಲಗಿದ್ದರು. ನರಳಾಟದ ಶಬ್ದ ಕೇಳಿ ಬಂದಾಗ ಘಟನೆ ತಿಳಿದು ಬಂದಿತ್ತು. ಬಳಿಕ ಸ್ಥಳೀಯರು ಸೇರಿ ಗಂಭೀರ ಗಾಯಗೊಂಡ ಇಬ್ಬರನ್ನೂ ಬಂಟ್ವಾಳ ಸರಕಾರಿ ಆಸ್ಪತ್ರೆ ಗೆ ಸಾಗಿಸಿದರಾದರೂ ಅದಾಗಲೇ ಇಬ್ಬರೂ ಮೃತಪಟ್ಟಿದ್ದರು.

    ಮಾಹಿತಿ ತಿಳಿದ ಬಂಟ್ವಾಳ ಗ್ರಾಮಾಂತರ ಎಸ್.ಐ. ಪ್ರಸನ್ನ ಮತ್ತು ಸಿಬಂದಿ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.  ನೀಲಯ್ಯ ಅವರು ಈ ಹಿಂದೆ ಕೈ ಮಗ್ಗ ನಡೆಸುತ್ತಿದ್ದು, ಅನಾರೋಗ್ಯ ದಿಂದ ನಿಲ್ಲಿಸಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply