Connect with us

LATEST NEWS

ಆಮ್ ಆದ್ಮಿ ಪಕ್ಷದ ರಾಜ್ಯಸಭೆ ಸಂಸದೆಗೆ ಸಿಎಂ ನಿವಾಸದಲ್ಲೇ ಹೊಡೆದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್

ನವದೆಹಲಿ ಮೇ 17: ಆಮ್ ಆದ್ಮಿ ಪಕ್ಷದ ರಾಜ್ಯಸಭೆ ಸಂಸದೆ ಸ್ವಾತಿ ಮಲಿವಾಲ್ ಮೇಲೆ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ ಹಲ್ಲೆ ನಡೆಸಿದ ಬಗ್ಗೆ ಎಫ್ಐಆರ್ ಆಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಸಂಸದೆ ಸ್ವಾತಿ ಮಲಿವಾಲ್ ಮೇ 13 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ದೌರ್ಜನ್ಯದ ಬಗ್ಗೆ ಎಳೆ ಎಳೆಯಾಗಿ ಸ್ವಾತಿ ದೂರಿನಲ್ಲಿ ವಿವರಿಸಿದ್ದಾರೆ.


ಮೇ 13 ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಅರವಿಂದ್ ಕೇಜ್ರಿವಾಲ್ ಅವರ ಮನೆಯ ಡ್ರಾಯಿಂಗ್ ರೂಮ್‍ನಲ್ಲಿ ಈ ಘಟನೆ ನಡೆದಿದೆ. ಘಟನೆಯ ಸಮಯದಲ್ಲಿ ಕೇಜ್ರಿವಾಲ್ ನಿವಾಸದಲ್ಲಿ ಇದ್ದರು ಎಂದು ಹೇಳಿದ್ದಾರೆ. ಎಫ್ಐಆರ್ ಮಾಹಿತಿ ಪ್ರಕಾರ ಸ್ವಾತಿ ಮಲಿವಾಲ್ ಸಿಎಂ ನೋಡಲು ಅವರ ನಿವಾಸಕ್ಕೆ ತೆರಳಿದ್ದಾರೆ. ಈ ವೇಳೆ ಡ್ರಾಯಿಂಗ್ ರೂಂ ನಲ್ಲಿ ಕಾಯುತ್ತಿರುವ ಸಂದರ್ಭ ಕೇಜ್ರಿವಾಲ್ ಅವರ ವೈಯಕ್ತಿಕ ಸಹಾಯಕ ಬಿಭವ್ ಕುಮಾರ್ ಬಂದು ಅವಾಚ್ಯ ಶಬ್ದಗಳಿಂದ ನನಗೆ ನಿಂದಿಸಿದ್ದಾರೆ. ಬಳಿಕ ಏಕಾಏಕಿ ನನ್ನ ಮೇಲೆ ಕೈಮಾಡಿದ್ದಾರೆ ಎಂದು ಸ್ವಾತಿ ಮಲಿವಾಲ್ ತಿಳಿಸಿದ್ದಾರೆ. ನನಗೆ 7-8 ಬಾರಿ ಕಪಾಳಮೋಕ್ಷ ಮಾಡಿದ್ದಾನೆ. ನಾನು ಎಷ್ಟೇ ಮನವಿ ಮಾಡಿಕೊಂಡರೂ ಪದೇ ಪದೇ ನನ್ನ ಹೊಟ್ಟೆ ಮತ್ತು ಸೊಂಟಕ್ಕೆ ಒದ್ದಿದ್ದಾನೆ. ನಾನು ನನ್ನ ಪಿರಿಯಡ್ಸ್ ನಲ್ಲಿ ಇದ್ದೇನೆ ಎಂದು ಹೇಳಿದ್ದರೂ ಕೂಡ ಕ್ಯಾರೆ ಮಾಡದೆ ನನ್ನ ಹೊಟ್ಟೆಯ ಕೆಳಭಾಗಕ್ಕೆ ತುಳಿದಿದ್ದಾನೆ ಎಂದಿದ್ದಾರೆ.


ಕುಮಾರ್ ಅವರು ನನಗೆ 7-8 ಬಾರಿ ಕಪಾಳಮೋಕ್ಷ ಮಾಡಿದ್ದಾನೆ. ಆಗ ನಾನು ಸಂಪೂರ್ಣವಾಗಿ ಆಘಾತಕ್ಕೊಳಗಾದೆ. ಕೂಡಲೇ ಸಹಾಯಕ್ಕಾಗಿ ಅಂಗಲಾಚಿದ್ದೇನೆ. ಈ ವೇಳೆ ಅವರು ನನ್ನ ಬಟ್ಟೆಯನ್ನು ಹಿಡಿದು ಎಳೆದುಕೊಂಡು ಹೋಗಿ ನನ್ನ ತಲೆಯನ್ನು ಮೇಜಿಗೆ ಹೊಡೆದಿದ್ದಾನೆ. ಈ ವೇಳೆ ನಾನು ಕೆಳಗೆ ಬಿದ್ದೆ. ನಾನು ಸಹಾಯಕ್ಕಾಗಿ ನಿರಂತರವಾಗಿ ಕಿರುಚಾಡಿದರೂ ಯಾರೊಬ್ಬರು ನನ್ನ ರಕ್ಷಣೆಗೆ ಬರಲಿಲ್ಲ.

ನಾನು ಪದೇ ಪದೇ ಕಿರುಚಾಡಿದ್ರೂ ಬಿಭವ್ ನನ್ನ ಮೇಲೆ ಹಲ್ಲೆ ಮಾಡುವುದನ್ನು ಬಿಡಲಿಲ್ಲ. ನನ್ನ ಎದೆ, ಹೊಟ್ಟೆ ಹಾಗೂ ಸೊಂಟಕ್ಕೆ ಪದೇ ಪದೇ ಒದ್ದಿದ್ದಾನೆ. ನನ್ನ ಬಿಟ್ಟುಬಿಡುವಂತೆ ಅಂಗಲಾಚಿದ್ರೂ ಆತ ಕರುಣೆ ತೋರಲಿಲ್ಲ, ಪಶ್ಚಾತ್ತಾಪಡಲಿಲ್ಲ, ಬದಲಾಗಿ ನನ್ನ ಮೇಲೆ ದಾಳಿ ಮುದುವರಿಸಿದ್ದಾನೆ ಎಂದು ಮಲಿವಾಲ್ ದೂರಿನಲ್ಲಿ ಆರೋಪಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *