Connect with us

    DAKSHINA KANNADA

    ಅಲಂಕಾರು – ಮೇಲ್ಚಾವಣಿಯಿಂದ ಬಿದ್ದು ಸಾವನಪ್ಪಿದ ಉದಯ ಕುಮಾರ್‌

    ಆಲಂಕಾರು ಡಿಸೆಂಬರ್ 27: ಹೊಸ ಮನೆಯ ಮೇಲ್ಛಾವಣಿ ಕಾಮಗಾರಿ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಆಲಂಕಾರು ಗ್ರಾಮದ ಬಾರ್ಕುಲಿ ನಿವಾಸಿ ಉದಯ ಕುಮಾರ್‌ (27) ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.


    ನವೆಬಂರ್ 12ರಂದು ತನ್ನ ಮನೆಯ ಮೇಲ್ಛಾವಣಿಗೆ ತೆರಳಿ ಕೆಳಗಿಳಿಯುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಕುತ್ತಿಗೆಯ ಭಾಗಕ್ಕೆ ಗಂಭೀರ ಗಾಯಕ್ಕೊಳಗಾಗಿದ್ದರು. ಅವರನ್ನು ತತ್‌ಕ್ಷಣ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಬಳಿಕ ಮಂಗಳೂರು ವೆನ್ಲಾಕ್‌ ಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಮಂಗಳವಾರ ಸಂಜೆ ವೇಳೆ ಚಿಕಿತ್ಸೆ ಫ‌ಲಕಾರಿಯಾಗದೆ ನಿಧನ ಹೊಂದಿದರು.
    ಅವರು ವಿವಿಧ ಸಂಘಟನೆಗಳಲ್ಲಿ ಸಕ್ರಿಯ ಸದಸ್ಯರಾಗಿದ್ದುಕೊಂಡು ಸಮಾಜಸೇವಕರಾಗಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply