Connect with us

KARNATAKA

ಚಾಮರಾಜನಗರ – ಲಘು ವಿಮಾನ ಪತನ – ಪೈಲೆಟ್ ಸೇಫ್

ಚಾಮರಾಜನಗರ ಜೂನ್ 1: ಲಘು ವಿಮಾನವೊಂದು ಪತನಗೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಭೋಗಪುರ ಬಳಿ ನಡೆದಿದೆ.


ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಜೆಟ್ ವಿಮಾನ ಪತನಗೊಂಡು, ಹೊತ್ತಿ ಉರಿದಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್​ಗಳು ಪ್ಯಾರಾಚೂಟ್ ಬಳಸಿ ವಿಮಾನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಆಕಾಶದಲ್ಲಿ ತರಬೇತಿ ನೀಡುತ್ತಿದ್ದ ವೇಳೆ ವಿಮಾನ ಪತನಗೊಂಡಿದೆ. ಪುರುಷ ಪೈಲಟ್ ತೇಜಪಾಲ್ (43)​ ಮಹಿಳೆ ಪೈಲಟ್ ಭೂಮಿಕಾ​ಗೆ ತರಬೇತಿ ನೀಡುತ್ತಿದ್ದರು. ಈ ವೇಳೆ ಆಕಾಶದಲ್ಲೇ ವಿಮಾನ ಪತನಗೊಂಡಿದೆ. ಕೂಡಲೇ ಎಚ್ಚೆತ್ತುಕೊಂಡ ಪುರುಷ ಮತ್ತು ಮಹಿಳಾ ತರಬೇತಿ ಪೈಲಟ್​ ಕೂಡಲೇ ಪ್ಯಾರಾಚೂಟ್​ ಮೂಲಕ ತಮ್ಮ ಜೀವ ಉಳಿಸಿಕೊಂಡಿದ್ದಾರೆ.

ಹೀಗಾಗಿ ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಬೆಂಗಳೂರಿನ ಹೆಚ್​ಎಎಲ್​ ಏರ್​ಪೋರ್ಟ್​ನಿಂದ ತೆರಳಿದ್ದ ವಿಮಾನ, ಭೋಗಪುರ ಬಳಿ ಪತಗೊಂಡಿದೆ. ಇನ್ನು ವಿಮಾನ ಛಿದ್ರ ಛಿದ್ರವಾಗಿದ್ದು, ಅದರ ಬಿಡಿ ಭಾಗಗಗಳು ಎಲ್ಲೆಂದರಲ್ಲಿ ಬಿದ್ದಿವೆ. ಅತ್ತ ನೆಲಕ್ಕೆ ಬಿದ್ದ ವಿಮಾನ ನುಜ್ಜು ನುಜ್ಜಾಗಿ ತುಂಡರಿಸಿ ಬಿದ್ದಿವೆ. ಪೈಲೆಟ್​​ಗಳನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಘಟನಾ ಸ್ಥಳಕ್ಕೆ ಸಂತೆಮರಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *