Connect with us

KARNATAKA

ಅಂಗನವಾಡಿ ಮುಗಿಸಿ ಅಜ್ಜಿ ಜೊತೆ ತೆರಳುತ್ತಿದ್ದ ಬಾಲಕಿ ಮೇಲೆ ಹರಿದ ಟಿಪ್ಪರ್..ಬಾಲಕಿ ಸ್ಥಳದಲ್ಲೇ ಸಾವು…!!

ದಾವಣಗೆರೆ ಜೂನ್ 21 : ತನ್ನ ಅಜ್ಜಿ ಜೊತೆ ತೆರಳುತ್ತಿದ್ದ ಪುಟ್ಟ ಬಾಲಕಿ ಮೇಲೆ ಟಿಪ್ಪರ್ ಲಾರಿ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ದಾವಣಗೆರೆ ನಗರದ ಹಳೇ ಕುಂದುವಾಡದಲ್ಲಿ ನಡೆದಿದೆ.


ಮೃತ ಬಾಲಕಿಯನ್ನು ಕುಂದುವಾಡ ಗ್ರಾಮದ ಗಣೇಶ್ ಪುತ್ರಿ ಚರಸ್ವಿ (3) ಎಂದು ಗುರುತಿಸಲಾಗಿದೆ. ಬಾಲಕಿ ಅಂಗನವಾಡಿ ಮುಗಿಸಿ ಅಜ್ಜಿ ಜೊತೆ ತೆರಳುತ್ತಿದ್ದ ವೇಳೆ ಎಂಸ್ಯಾಂಡ್ ತುಂಬಿದ್ದ ಟಿಪ್ಪರ್ ಲಾರಿಯ ಚಕ್ರ ಹರಿದ ರಭಸಕ್ಕೆ ಬಾಲಕಿ ಮೆದುಳು ಚಿದ್ರ ಚಿದ್ರಗೊಂಡಿದೆ. ಟಿಪ್ಪರ್ ಚಾಲಕನ ಅಜಾಗರುಕತೆಯಿಂದ ಅವಘಡ ನಡೆದಿದೆ.


ಬೆಳಗ್ಗೆಯಿಂದ ಸಂಜೆ ವರೆಗೂ ಬೃಹತ್ ವಾಹನಗಳು ನಗರದಲ್ಲಿ ಸಂಚಾರ ಮಾಡುವಂತಿಲ್ಲ ಎನ್ನುವ ಎಸ್‌ಪಿ ಅವರ ಆದೇಶವಿದ್ದರೂ ಕೂಡ ಅದನ್ನು ಧಿಕ್ಕರಿಸಿ ಎಂ ಸ್ಯಾಂಡ್ ಲಾರಿಗಳು ಅಡ್ಡಾಡುತ್ತಿವೆ. ಇದರಿಂದ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು ಘಟನೆ ಖಂಡಿಸಿ ರಸ್ತೆ ಬಂದ್ ಮಾಡಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಾರಿ ಚಾಲಕ, ಮಾಲೀಕನ ಬಂಧನಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ದಕ್ಷಿಣ ಸಂಚಾರಿ ಠಾಣೆ, ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *