LATEST NEWS
Bajpe – ಹಾವಿನ ಮರಿ ಎಂದು ನಿರ್ಲಕ್ಷ ತಂದ ಆಪತ್ತು – ಕನ್ನಡಿ ಹಾವು ಕಚ್ಚಿ ವ್ಯಕ್ತಿ ಸಾವು
ಮಂಗಳೂರು ಸೆಪ್ಟೆಂಬರ್ 13: ವಿಷ ರಹಿತ ಹಾವಿನ ಮರಿ ಎಂದು ಕೈಯಲ್ಲಿ ಹಾವನ್ನು ಹಿಡಿಯಲು ಹೋಗಿ ಹಾವು ಕಚ್ಚಿ ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಬಜ್ಪೆಯಲ್ಲಿ ನಡೆದಿದೆ.
ಮೃತರನ್ನು ಬಜ್ಪೆಯ ರಾಮಚಂದ್ರ ಪೂಜಾರಿ(55) ಎಂದು ಗುರುತಿಸಲಾಗಿದೆ. ಇವರು ಗುರುವಾರ ಇಲ್ಲಿನ ಪರಿಸರದಲ್ಲಿ ಕನ್ನಡಿ ಹಾವೊಂದು ಕಾಣಿಸಿಕೊಂಡಿತ್ತು ಇದನ್ನು ರಾಮಚಂದ್ರ ಪೂಜಾರಿ ಅವರು ವಿಷರಹಿತ ಹಾವೆಂದು ತಪ್ಪಾಗಿ ತಿಳಿದು ಕೈಯಲ್ಲಿ ಹಿಡಿದಿದ್ದಾರೆ ಆದರೆ ಈ ವೇಳೆ ಹಾವು ರಾಮಚಂದ್ರ ಅವರ ಕೈಗೆ ಕಚ್ಚಿದೆ, ಇದನ್ನು ಗಂಭೀರವಾಗಿ ಪರಿಗಣಿಸದ ರಾಮಚಂದ್ರ ಅವರು ಮನೆಗೆ ತೆರಳಿದ್ದರು ಆದರೆ ಸಂಜೆಯಾಗುತ್ತಲೇ ಅವರ ಅರೋಗ್ಯ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಇಂದು ಶುಕ್ರವಾರ ಮೃತಪಟ್ಟಿದ್ದಾರೆ ಎನ್ನಲಾಗಿದೆ.
You must be logged in to post a comment Login