Connect with us

    BELTHANGADI

    ಬಟ್ಟೆ ನುಂಗಿ ಒದ್ದಾಡುತ್ತಿದ್ದ ನಾಗರ ಹಾವಿನ ರಕ್ಷಣೆ…!!

    ಬೆಳ್ತಂಗಡಿ ಅಗಸ್ಟ್ 13: ಮಗುವಿನ ಬಟ್ಟೆಯನ್ನು ನುಂಗಿ ಸಾವು- ಬದುಕಿನ ಮಧ್ಯೆ ಒದ್ದಾಡುತ್ತಿದ ನಾಗರ ಹಾವನ್ನು ಸ್ನೇಕ್ ಅಶೋಕ್ ಲಾಯಿಲ ಅವರು ರಕ್ಷಣೆ ಮಾಡಿದ್ದಾರೆ.

    ಬೆಳ್ತಂಗಡಿ ತಾಲ್ಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಕುಳಾಯಿ ನಿವಾಸಿ ಶೇಖರ್ ಶೆಟ್ಟಿ ಅವರ ಮನೆಯ ಪಕ್ಕದಲ್ಲಿರುವ ಕೊಟ್ಟಿಗೆ ಒಳಗಡೆ ಬಿಸಾಡಿದ ಮಗುವಿನ ಬಟ್ಟೆಯೊಂದನ್ನು ಸುಮಾರು 4.5 ಉದ್ದದ ನಾಗರ ಹಾವು ನುಂಗಿದ್ದು, ಕೊನೆಗೆ ಸಿಕ್ಕಿಹಾಕಿಕೊಂಡು ಒದ್ದಾಡುತ್ತಿದ್ದಾಗ ಮನೆಯವರು ನೋಡಿ ಸ್ನೇಕ್ ಅಶೋಕ್ ಲಾಯಿಲ ಅವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಸ್ನೇಕ್ ಅಶೋಕ್ ಹಾವಿನ ಬಾಯಿಯಿಂದ ಬಟ್ಟೆ ಹೊರತೆಗೆದು ರಕ್ಷಣೆ ಮಾಡಿ ನಂತರ ಸುರಕ್ಷಿತವಾಗಿ ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply