Connect with us

    LATEST NEWS

    ಡಾ. ರವೀಂದ್ರನಾಥ ಶಾನುಭಾಗ್ ಅವರಿಗೆ ಹೃದಯಾಘಾತ – ಮುಂದುವರಿದ ಚಿಕಿತ್ಸೆ

    ಉಡುಪಿ ಎಪ್ರಿಲ್ 1: ಮಾನವ ಹಕ್ಕುಗಳ ಹೋರಾಟಗಾರ ಡಾ. ರವೀಂದ್ರನಾಥ ಶಾನುಭಾಗ್ ಅವರಿಗೆ ಹೃದಯಾಘಾತವಾಗಿದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.


    ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಟಾನ ಮತ್ತು ಹಿರಿಯ ನಾಗರಿಕರ ಹಕ್ಕುಗಳ ಹೋರಾಟಗಾರರಾಗಿರುವ ಡಾ. ರವೀಂದ್ರನಾಥ ಶಾನುಭಾಗ್ ಅವರು ಮಾರ್ಚ್ 31 ರ ಗುರುವಾರ ರಾತ್ರಿ ಹೃದಯಾಘಾತಕ್ಕೊಳಗಾಗಿದ್ದರು, ತಕ್ಷಣ ಕುಟುಂಬಸ್ಥರು ಅವರನ್ನು ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿಗೆ ದಾಖಲು ಮಾಡಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಆಂಜಿಯೋಪ್ಲಾಸ್ಟ್ ಮಾಡಲಾಗಿದ್ದು, ಶಾನುಭಾಗ್ ಚಿಕಿತ್ಸೆ ಗೆ ಸ್ಪಂದಿಸುತ್ತಿದ್ದಾರೆ. ಸ್ಟಂಟ್ ಅಳವಡಿಸಲಾಗಿದೆ. ತಜ್ಞ ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಎರಡು ಮೂರು ದಿನಗಳ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಮಾಡಬಹುದು” ಎಂದು ಕೆಎಂಸಿ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಮಾಹಿತಿ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply