Connect with us

    LATEST NEWS

    ಯುದ್ಧ ಸ್ಮಾರಕದ ಕಾಮಗಾರಿಗೆ ಒಂದು ತಿಂಗಳ ವೇತನ ನೀಡುವೆ – ಕೇಂದ್ರ ಸಚಿವ ಸೋಮಣ್ಣ

    ಮಂಗಳೂರು ಜುಲೈ 17: ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತರ 25 ಲಕ್ಷ ರೂಪಾಯಿ ವಿಶೇಷ ಅನುದಾನದಲ್ಲಿ ಅಭಿವೃದ್ಧಿಗೊಳ್ಳಲಿರುವ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 32ನೇ ಕದ್ರಿ ಉತ್ತರ ವಾರ್ಡ್ ನಲ್ಲಿರುವ ಯುದ್ಧ ಸ್ಮಾರಕದ ಕಾಮಗಾರಿಯ ಗುದ್ದಲಿ ಪೂಜೆಗೆ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ.ಸೋಮಣ್ಣ ರವರು ಚಾಲನೆ ನೀಡಿದರು.


    ಬಳಿಕ ಮಾತನಾಡಿದ ಸಚಿವರು, ದೇಶ ಕಾಯುವ ಹುತಾತ್ಮ ಯೋಧರ ನೆನಪಿಗಾಗಿ ನಿರ್ಮಿಸಲಾಗಿದ ಯುದ್ಧ ಸ್ಮಾರಕದ ಅಭಿವೃದ್ಧಿ ಮಾಡುವ ಭಾಗ್ಯ ಈ ಭಾಗದ ಜನಪ್ರತಿನಿಧಿಗಳಿಗೆ ಸಿಕ್ಕಿರುವುದು ಪುಣ್ಯ ಕಾರ್ಯ. ಯುದ್ದ ಸ್ಮಾರಕದ ಅಭಿವೃದ್ಧಿಗೆ ಶಾಸಕ ವೇದವ್ಯಾಸ್ ಕಾಮತ್ ರ 25 ಲಕ್ಷ ವಿಶೇಷ ಅನುದಾನ ಲಭಿಸಿದ್ದು, ಮನಪಾ ಉಳಿದ ಖರ್ಚು ಭರಿಸುವ ಭರವಸೆ ನೀಡಿದೆ. ಅಂತೆಯೇ ನಾನು ಕೂಡಾ ನನ್ನ ಒಂದು ತಿಂಗಳ ವೇತನವಾದ 1 ಒಂದು ಲಕ್ಷವನ್ನು ಈ ಪುಣ್ಯ ಕಾರ್ಯಕ್ಕೆ ಸಮರ್ಪಿಸುತ್ತೇನೆ ಎಂದು ಘೋಷಿಸಿದರು.


    ಶಾಸಕ ವೇದವ್ಯಾಸ್ ಕಾಮತ್ ಅವರು ಮಾತನಾಡಿ ಸೈನಿಕರು ಈ ದೇಶದ ಹೆಮ್ಮೆ. ಅವರ ತ್ಯಾಗಕ್ಕೆ ಎಂದಿಗೂ ಸಾಟಿಯಿಲ್ಲ. ಅವರನ್ನು ಗೌರವಿಸುವುದು ನಮ್ಮೆಲ್ಲರ ಜವಾಬ್ದಾರಿ. ಈ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಶೀಘ್ರದಲ್ಲಿ ಪೂರ್ಣಗೊಳ್ಳುವಂತೆ ನೋಡಿಕೊಳ್ಳಲಾಗುವುದು ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply