KARNATAKA
ಮಗ ಹಾರ್ಟ್ ಆ್ಯಟಕ್ನಿಂದ ಮೃತ್ಯು,ಮಗನ ಸಾವಿನ ಸುದ್ದಿ ಕೇಳಿ ತಂದೆಯೂ ಹೃದಯಾಘಾತಕ್ಕೆ ಬಲಿ..!!
ಹಾವೇರಿ : ಮಗ ಹಾರ್ಟ್ ಆ್ಯಟಕ್ನಿಂದ ಮೃತಮಟ್ಟ ಸುದ್ದಿ ಕೇಳಿದ ತಂದೆಯೂ ಹೃದಯಾಘಾತದಿಂದ (Heart attack_ ಮೃತಪಟ್ಟಿರುವ ದಾರುಣ ಘಟನೆ ಹಾವೇರಿ ಜಿಲ್ಲೆಯ ಬಸವೇಶ್ವರ ನಗರದಲ್ಲಿ ನಡೆದಿದೆ.
ಡಾ. ವಿನಯ್ ಗುಂಡಗಾವಿ (38) ಡಾ. ವೀರಭದ್ರಪ್ಪ ಗುಂಡಗಾವಿ (68) ಮೃತ ಅಪ್ಪ – ಮಗನಾಗಿದ್ದಾರೆ. ಒಂದೇ ದಿನ ತಂದೆ ಮಗ ಇಬ್ಬರೂ ಮೃತಪಟ್ಟಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ವೃತ್ತಿಯಲ್ಲಿ ಇಬ್ಬರು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಮಗನ ಸಾವಿನ ಸುದ್ದಿ ಕೇಳಿದ 68 ವರ್ಷದ ತಂದೆ ಡಾ.ವೀರಭದ್ರಪ್ಪ ಗುಂಡಗಾವಿಗೆ ಹಾವೇರಿಯಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಮಗ ಡಾ. ವಿನಯ ಹುಬ್ಬಳ್ಳಿಯಲ್ಲಿ (Hubballi) ವೈದ್ಯರಾಗಿ ಕೆಲಸ ಮಾಡುತ್ತಿದ್ದರು. ತಂದೆ ಡಾ.ವೀರಭದ್ರಪ್ಪ ಹಾವೇರಿಯಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದರು. ತಂದೆ ಮತ್ತು ಮಗ ಅತ್ಯಂತ ಅನೋನ್ಯವಾಗಿದ್ದರು. ಹೀಗಾಗಿ ಮಗ ಡಾ.ವಿನಯನ ಸಾವಿನ ಸುದ್ದಿ ಅರಗಿಸಿಕೊಳ್ಳಲಾಗದೆ ತಂದೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
You must be logged in to post a comment Login