Connect with us

    LATEST NEWS

    ಇದು ನನ್ನ ಕೊನೆಯ ಚುನಾವಣೆ, ಈ ಬಾರಿ ಸೋಲಿಸಿ ನಿವೃತ್ತಿ ಮಾಡಬೇಡಿ – ವಿನಯ್ ಕುಮಾರ್ ಸೊರಕೆ

    ಉಡುಪಿ ಮಾರ್ಚ್ 28: ಇದು ನನ್ನ ಕೊನೆಯ ಚುನಾವಣೆಯಾಗಿದ್ದು, ಈ ಬಾರಿ ನನ್ನನ್ನು ಸೋಲಿಸಿ ನಿವೃತ್ತಿ ಮಾಡಬೇಡಿ ಎಂದು ಮಾಜಿ ಸಚಿವ ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಮತದಾರರಲ್ಲಿ ಮನವಿ ಮಾಡಿದ್ದಾರೆ.


    ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ‘ಕಳೆದ ಬಾರಿಯೇ ನಾನು ಕಡೆಯ ಚುನಾವಣೆ ಎಂದು ಘೋಷಣೆ ಮಾಡಿದ್ದೆ. ಆದರೆ, ವಿರೋಧ ಪಕ್ಷಗಳ ಅಪಪ್ರಚಾರದಿಂದ ಸೋಲಾಯಿತು. ಸೋತರೂ ಐದು ವರ್ಷ ಕ್ಷೇತ್ರದ ಜನರ ಜೊತೆ ನಿಕಟ ಸಂಪರ್ಕದಿಂದ ಇದ್ದೆ. ಎಲ್ಲರ ಬೆಂಬಲದೊಂದಿಗೆ ಮತ್ತೊಮ್ಮೆ ಸರ್ವಾನುಮತದಿಂದ ಅಭ್ಯರ್ಥಿಯಾಗಿದ್ದೇನೆ’ ಎಂದರು. ಇದು ನನ್ನ ಕೊನೆಯ ಚುನಾವಣೆಯಾಗಿದ್ದು, ಸೋಲಿಸಿ ನನ್ನನ್ನು ನಿವೃತ್ತಿ ಮಾಡಬೇಡಿ, ಗೆಲ್ಲಿಸುವ ಮೂಲಕ 5 ವರ್ಷ ಜನರ ಸೇವೆಗೆ ಅವಕಾಶ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

    Share Information
    Advertisement
    Click to comment

    You must be logged in to post a comment Login

    Leave a Reply