Connect with us

    DAKSHINA KANNADA

    ಪುತ್ತೂರು – ಹಲ್ಲೆ ನಡೆದಿರುವುದು ದಾರಿ ವಿಚಾರಕ್ಕೆ ಅಕ್ಷತೆ ವಿಚಾರಕ್ಕೆ ಅಲ್ಲ – ಎಸ್ಪಿ ಸ್ಪಷ್ಟನೆ

    ಪುತ್ತೂರು ಜನವರಿ 16: ಮುಂಡೂರು ಎಂಬಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದಕ್ಷಿಣಕನ್ನಡ ಜಿಲ್ಲಾ ಎಸ್ಪಿ ಸಿ.ಬಿ.ರಿಷ್ಯಂತ್ ಸ್ಪಷ್ಟನೆ ನೀಡಿದ್ದು, ಈ ಹಲ್ಲೆಗೂ ರಾಮ ಅಕ್ಷತೆ ವಿತರಣೆಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.


    ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು ಮುಂಡೂರಿನಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಅಕ್ಷತೆ ಹಂಚುವ ವಿಚಾರಕ್ಕೆ ನಡೆದ ಹಲ್ಲೆ ಅಲ್ಲ ಅದು ಜಾಗದ ವಿಚಾರಕ್ಕೆ ನಡೆದ ಗಲಾಟೆ ಆಗಿದೆ. ಹಲ್ಲೆ ನಡೆಸಿದವರಿಗೂ, ಹಲ್ಲೆಗೊಳಗಾದ ಸಂತೋಷ್ ಕುಟುಂಬದ ಮಧ್ಯೆ ದಾರಿ ವಿಚಾರವಾಗಿ ವಿವಾದವಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಗಲಾಟೆ ನಡೆದಿದೆ. ಈಗ ಎರಡೂ ಕಡೆಯವರು ದೂರು ನೀಡಿದ್ದಾರೆ. ಎರಡೂ ಕಡೆಯವರ ದೂರಿನಂತೆ ಪ್ರಕರಣ ದಾಖಲಾಗಿದೆ . ಈ ಘಟನೆಯಲ್ಲಿ ಯಾವುದೇ ರಾಜಕೀಯ ದ್ವೇಷ ಅಥವಾ ಅಕ್ಷತೆಯ ವಿಚಾರವಿಲ್ಲ ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply