ಪುತ್ತೂರು ಜೂನ್ 10: ಪ್ರಧಾನಿ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡು 12 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಪುತ್ತೂರು ಬಿಜೆಪಿ ಘಟಕದ ವತಿಯಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

ಪುತ್ತೂರು ನಗರ ಬಿಜೆಪಿ ಅಧ್ಯಕ್ಷ ಶಿವಕುಮಾರ್ ನೇತೃತ್ವದಲ್ಲಿ ಈ ವಿಶೇಷ ಪೂಜೆ ನಡೆದಿದ್ದು, ದೇವರಿಗೆ ತುಪ್ಪದ ದೀಪವನ್ನೂ ಉರಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ದೀರ್ಘಾಯುಷ್ಯಕ್ಕೆ ಪ್ರಾರ್ಥಿಸಲಾಯಿತು. ಪ್ರಾರ್ಥನೆ ನೆರವೇರಿಸಿದ ಬಳಿಕ ಮಾತನಾಡಿದ ಮಾಜಿ ಶಾಸಕ ಸಂಜೀವ ಮಠಂದೂರು ದೇಶವನ್ನು ವಿಶ್ವದಲ್ಲಿ ಎತ್ತರಕ್ಕೆ ಏರಿಸಿದ ಮೋದಿಯವರಿಗೆ ದೀರ್ಘ ಆಯುಷ್ಯವನ್ನು ದೇವರ ಕರುಣಿಸಲೆಂದು ಪ್ರಾರ್ಥಿಸಲಾಯಿತು. ಮುಂದೆಯೂ ದೇಶದ 140 ಕೋಟಿ ಜನರ ಸೇವೆಯನ್ನು ಮಾಡಲು ದೇವರು ಶಕ್ತಿ ಕರುಣಿಸಬೇಕೆಂದು ಈ ಪ್ರಾರ್ಥನೆಯನ್ನು ನೆರವೇರಿಸಲಾಗಿದೆ ಎಂದರು.