Connect with us

    KARNATAKA

    ಶ್ರೀರಂಗಪಟ್ಟಣ – ನಾಲ್ವರು ಮಕ್ಕಳು ಸೇರಿದಂತೆ ಓರ್ವ ಮಹಿಳೆಯನ್ನು ಕೊಚ್ಚಿ ಕೊಲೆ…!!

    ಮಂಡ್ಯ: ನಾಲ್ವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಗ್ರಾಮದಲ್ಲಿ ನಡೆದಿದೆ.


    ಮಾರಕಾಸ್ತ್ರಗಳಿಂದ ಕೊಚ್ಚಿ ಒಂದೇ ಕುಟುಂಬದ ಐವರನ್ನು ಹತ್ಯೆ ಮಾಡಲಾಗಿದ್ದು, ಮೃತರನ್ನು ಲಕ್ಷ್ಮಿ (26) ಹಾಗೂ ಪುಟ್ಟ ಮಕ್ಕಳಾದ ರಾಜು (12), ಕೋಮಲ್ (7), ಕುನಾಲ್ (4), ಗೋವಿಂದ (8) ಗುರ್ತಿಸಲಾಗಿದೆ. ಹತ್ಯೆಗೆ ನಿಖರ ಕಾರಣಗಳು ತಿಳಿದುಬಂದಿಲ್ಲ.


    ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದು. ಈ ಸಾಮೂಹಿಕ ಹತ್ಯೆಗೆ ನಿಖರ ಕಾರಣ ತಿಳಿದು‌ ಬಂದಿಲ್ಲ. ಲಕ್ಷ್ಮಿ ಅವರ ಪತಿ ಗಂಗಾರಾಂ ವ್ಯಾಪಾರ ನಿಮಿತ್ತ ಹೊರ ಹೋಗಿದ್ದಾಗ ಈ ಕೃತ್ಯ ನಡೆದಿದೆ. ಸ್ಥಳಕ್ಕೆ ದಕ್ಷಿಣ‌ ವಲಯ ಐ.ಜಿ ಪ್ರವೀಣ್ ಮಧುಕರ್‌ ಪವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಪರಿಶೀಲನೆ‌ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಕಳುಹಿಸಲಾಯಿತು. ‘ಘಟನೆಗೆ ಕಾರಣ ಇನ್ನೂ ನಿಗೂಢವಾಗಿದೆ. ಮೃತದೇಹಗಳ ಮೇಲೆ ಗಾಯಗಳಾಗಿರುವ ಕಾರಣ ಕೊಲೆ ಎಂದು ಶಂಕಿಸಲಾಗಿದೆ. ಎಲ್ಲಾ ದಿಕ್ಕುಗಳಿಂದಲೂ ತನಿಖೆ ಮಾಡಲಾಗುತ್ತಿದೆ’ ಎಂದು ಎಸ್ಪಿ ಎನ್.ಯತೀಶ್ ತಿಳಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply