LATEST NEWS
ಕಂಬಳದ ಉಸೇನ್ ಬೋಲ್ಟ್ ಶ್ರೀನಿವಾಸ ಗೌಡ ಅವರಿಗೆ ಪೋನ್ ಮೂಲಕ ಬೆದರಿಕೆ
ಮಂಗಳೂರು ಜುಲೈ 16: ಕಂಬಳದಲ್ಲಿ ದಾಖಲೆಗಳನ್ನು ನಿರ್ಮಿಸಿದ ಕಂಬಳದ ಉಸೇನ್ ಬೋಲ್ಟ್ ಎಂದೇ ಪ್ರಸಿದ್ಧಿಯಾದ ಶ್ರೀನಿವಾಸ ಗೌಡ ಅವರಿಗೆ ಶ್ರೀರಾಮ ಸೇನೆಯ ವ್ಯಕ್ತಿಯೊಬ್ಬರು ಪೋನ್ ಮೂಲಕ ಬೆದರಿಕೆ ಒಡ್ಡಿದ ಘಟನೆ ನಡೆದಿದ್ದು, ಬೆದರಿಕೆ ಸಂಭಾಷಣೆ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬೆದರಿಕೆ ಒಡ್ಡಿದ ವ್ಯಕ್ತಿ ಕರೆ ಮಾಡಿ ನಾನು ಪ್ರಶಾಂತ್ ಬಂಗೇರ, ಶ್ರೀರಾಮ ಸೇನೆಯಲ್ಲಿದ್ದೇನೆ ಎಂದು ಪರಿಚಯಿಸಿಕೊಂಡು ಮಂಗಳೂರು ಕಾರ್ ಸ್ಟ್ರೀಟ್ನಲ್ಲಿ ರಿಯಲ್ ಎಸ್ಟೇಟ್ ಕಚೇರಿ ಇದೆ ಅಲ್ಲಿಗೆ ಬನ್ನಿ ಕಂಬಳದ ಇತಿಹಾಸ ತಿಳಿಸುತ್ತೇನೆ’ ಎಂದು ಆಹ್ವಾನಿಸಿದ್ದಾನೆ ಆದರೆ, ಶ್ರೀನಿವಾಸ ಗೌಡ ಅವರು ನಾನು ಬರುವುದಿಲ್ಲ, ನೀವು ಒಂಟಿಕಟ್ಟೆಗೆ ಬನ್ನಿ ಎಂದು ಹೇಳಿದ್ದಾರೆ. ಅದಕ್ಕೆ ಆರೋಪಿ ಪ್ರಶಾಂತ ಬಂಗೇರ ನಾನು ಬರುತ್ತೇನೆ. ಆದರೆ. ನೀನು ಅಲ್ಲಿಗೆ ಬರುವಾಗ ಬೆನ್ನಿಗೆ ಹಾಳೆ ಕಟ್ಟಿಕೊಂಡು ಬಾ. ಜತೆಯಲ್ಲಿ ನಿನ್ನ ಬೆಂಬಲಿಗರನ್ನು ಕರೆದುಕೊಂಡು ಬಾ ಎಂದು ಗದರಿಸಿದ್ದಾನೆ. ಈ ಮೊಬೈಲ್ ಫೋನ್ ಸಂಭಾಷಣೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆರೋಪಿ ವಿರುದ್ಧ ಶ್ರೀನಿವಾಸ ಗೌಡ ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆಯನ್ನು ಖಂಡಿಸಿದ ಶಾಸಕ ಉಮಾನಾಥ ಕೋಟ್ಯಾನ್, ಇದು ತುಳುನಾಡಿಗೆ ಆಗಿರುವ ಅವಮಾನ, ಆರೋಪಿ ಪ್ರಶಾಂತ್ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಪೊಲೀಸರಿಗೆ ಸೂಚಿಸುವುದಾಗಿ ತಿಳಿಸಿದ್ದಾರೆ.
You must be logged in to post a comment Login