KARNATAKA
13ನೇ ತಾರೀಖಿನೊಳಗೆ ಅರ್ಚಕರ ನೇಮಿಸದಿದ್ದರೆ ಪರಿಸ್ಥಿತಿ ಕಠಿಣವಾಗುತ್ತೆ – ಶ್ರೀರಾಮಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ
ಚಿಕ್ಕಮಗಳೂರು ನವೆಂಬರ್ 07: ದತ್ತಪೀಠದಲ್ಲಿ 13ನೇ ತಾರಿಖಿನೊಳಗೆ ಅರ್ಚಕರ ನೇಮಕ ಮಾಡದಿದ್ದರೇ ಪರಿಸ್ಥಿತಿ ಕಠಿಣವಾಗಲಿದ್ದು, ಹೇಗೆ ಬಿಜೆಪಿ ಅಧ್ಯಕ್ಷರ ಕಾರು ಅಲುಗಾಡಿತ್ತೋ, ಅದೇ ರೀತಿ ಸರ್ಕಾರ ಅಲುಗಾಡುತ್ತೆ ಎಂದು ಶ್ರೀರಾಮಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಎಚ್ಚರಿಕೆ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಪ್ರತಿ ವರ್ಷ ಬರೋದು, ಹೆಣ ಇಲ್ಲದ ಗೋರಿ ನೋಡೋದು ವಾಪಸ್ ಹೋಗೋದು, ಎಚ್ಚರಿಕೆ ನೀಡಿ…ನೀಡಿ… ಬೇಜಾರು, ಆಕ್ರೋಶವಾಗಿದ್ದು, ನಮಗೆ ಈ ಬಿಜೆಪಿ ಸರ್ಕಾರದ ಮೇಲೆ ಹೇಸಿಗೆ ಬರುತ್ತಿದೆ ಎಂದು ಶ್ರೀರಾಮಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧರ್ಮದ ವಿಚಾರದಲ್ಲಿ ಡ್ರಾಮಾ ಒಳ್ಳೆದಲ್ಲ, ತಕ್ಷಣ ಏನಾದ್ರು ಆಗಲಿ ಎಂದು ಗಟ್ಟಿ ನಿರ್ಧಾರ ಮಾಡಿ, ದತ್ತಪೀಠವನ್ನ ಹಿಂದೂಗಳಿಗೆ ಒಪ್ಪಿಸದಿದ್ದರೆ ಯಡಿಯೂರಪ್ಪರ ಪೀಠ ಹೋಗುತ್ತೆ ಎಂದು ಹೇಳಿದ್ದೆ, ದತ್ತ ಗುರುಗಳ ಶಾಪದಿಂದ ಯಡಿಯೂರಪ್ಪ ಪೀಠ ಕಳ್ಕೊಂಡ್ರು, ಈಗ ಬೊಮ್ಮಾಯಿಗೂ ಹೇಳ್ತಿದ್ದೀವಿ, ಮುಂದೆ ಸರ್ಕಾರ ಬರಬೇಕಂದ್ರೆ ತಕ್ಷಣ ದತ್ತಪೀಠವನ್ನ ಹಿಂದುಗಳಿಗೆ ಒಪ್ಪಿಸಿ ಇಲ್ಲವಾದರೆ, ಯಡಿಯೂರಪ್ಪನವರಿಗೆ ಆದ ಪರಿಸ್ಥಿತಿಯೇ ನಿಮಗೂ ಆಗುತ್ತೆ ಎಂದರು.
You must be logged in to post a comment Login