LATEST NEWS
ಲಾಕ್ ಡೌನ್ ನಡುವೆ ಕಾರ್ಕಳ ಸರಕಾರಿ ಬೋಡ್೯ ಹೈಸ್ಕೂಲ್ ನಿಂದ ಎಸ್ಎಸ್ಎಲ್ ಸಿ ವಿಧ್ಯಾರ್ಥಿಗಳಿಗೆ ತರಗತಿ

ಲಾಕ್ ಡೌನ್ ನಡುವೆ ಕಾರ್ಕಳ ಸರಕಾರಿ ಬೋಡ್೯ ಹೈಸ್ಕೂಲ್ ನಿಂದ ಎಸ್ಎಸ್ಎಲ್ ಸಿ ವಿಧ್ಯಾರ್ಥಿಗಳಿಗೆ ತರಗತಿ
ಉಡುಪಿ ಮೇ.23: ಲಾಕ್ ಡೌನ್ ನಿಯಮಾವಳಿಗಳನ್ನು ಉಲ್ಲಂಘಿಸಿ ಎಸ್ಎಸ್ಎಲ್ ಸಿ ವಿಧ್ಯಾರ್ಥಿಗಳಿಗೆ ತರಗತಿ ನಡೆಸಲು ಮುಂದಾದ ಘಟನೆ ಉಡುಪಿ ಜಿಲ್ಲೆ ಕಾರ್ಕಳದಲ್ಲಿ ನಡೆದಿದೆ. ಸರಕಾರದ ಯಾವುದೇ ಆದೇಶವಿಲ್ಲದೆ ಲಾಕ್ ಡೌನ್, ನಿಷೇಧಾಜ್ಞೆಗಳನ್ನು ಮೀರಿ ಕಾರ್ಕಳ ಸರಕಾರಿ ಬೋಡ್೯ ಹೈಸ್ಕೂಲ್ ಶಾಲೆಯ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸುವ ಪ್ರಯತ್ನ ನಡೆದಿತ್ತು.
ಈಗಾಗಲೇ ಉಡುಪಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೊಂಕಿತರ ಸಂಖ್ಯೆ ಏರಿಕೆ ಹಾದಿಯಲ್ಲಿದೆ. ಆದರೂ ಕಾರ್ಕಳದ ಸರಕಾರ ಬೋರ್ಡ್ ಹೈಸ್ಕೂಲ್ ಶಾಲೆಯ ಎಸ್ಎಸ್ಎಲ್ ಸಿ ವಿಧ್ಯಾರ್ಥಿಗಳಿಗೆ ತರಗತಿ ನಡೆಸಲು ಮುಂದಾಗಿತ್ತು. ಈ ಹಿನ್ನಲೆ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಏಕಾಏಕಿ ತರಗತಿಗೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು. ವಿದ್ಯಾರ್ಥಿಗಳು ಹರಸಾಹಸ ಪಟ್ಟು ತರಗತಿಗಳಿಗೆ ಹಾಜರಾಗಿದ್ದಾರೆ. ಈ ಸಂಬಂಧಿಸಿ ವಿದ್ಯಾರ್ಥಿಗಳಿಗೆ ಅದ ತೊಂದರೆ ಬಗ್ಗೆ ಮುಖ್ಯೋಪಾಧ್ಯಾಯರನ್ನು ವಿಚಾರಿಸಿದಾಗ ಕ್ಷೇತ್ರ ಶಿಕ್ಷಣ ಅಧಿಕಾರಿ ಜಿಎಸ್ ಶಶಿಧರ್ ಸೂಚನೆಯಂತೆ ತರಗತಿಗಳನ್ನು ನಡೆಸಲಾಗಿದೆ ಎನ್ನುತ್ತಾರೆ. ಈ ಬಗ್ಗೆ ಜವಾಬ್ದಾರಿ ಇಲ್ಲದಂತೆ ತಾಲೂಕು ಶಿಕ್ಷಣ ಅಧಿಕಾರಿಗಳು ವರ್ತಿಸಿದ್ದಾರೆ ಎಂದು ಪೋಷಕರು ದೂರಿದ್ದಾರೆ.

ಕಾರ್ಕಳ ತಾಲೂಕಿನ ಈ ಭಾಗದಲ್ಲಿ ವಿದ್ಯಾರ್ಥಿಗಳು ಶಾಲೆಗೆ ಬರಲು ಖಾಸಗಿ ಸಾರಿಗೆ ಸಂಸ್ಥೆಗಳನ್ನೇ ಅವಲಂಬಿಸಿದ್ದು, ಇನ್ನು ಕೂಡಾ ಖಾಸಗಿ ಬಸ್ಸುಗಳು ರಸ್ತೆಗೆ ಇಳಿದ ಹಿನ್ನಲೆಯಲ್ಲಿ ಅನೇಕ ವಿದ್ಯಾರ್ಥಿಗಳು ಕಿಮೀ ಗಟ್ಟಲೇ ದೂರದಿಂದ ನಡೆದು ಕೊಂಡು ಬಂದರೆ. ಮತ್ತೆ ಕೆಲವರು ಸರಕು ಸಾಗಿಸುವ ಗೂಡ್ಸ್ ವಾಹನಗಳಲ್ಲಿ ಏರಿಕೊಂಡು ಶಾಲೆಗೆ ಬಂದು ತರಗತಿಗೆ ಹಾಜರಾಗಿದ್ದಾರೆ.
ಈ ನಿರ್ದಿಷ್ಟ ಶಾಲೆಯಲ್ಲಿ ಇಂತಹದೊಂದು ತೀರ್ಮಾನ ತೆಗೆದು ಕೊಳ್ಳುವುದಕ್ಕೆ ಹೇಗೆ ಸಾಧ್ಯ ? ಎಂದು ಅನೇಕ ಪೊಷಕರು ಪ್ರಶ್ನಿಸಿದ್ದಾರೆ. ಜಿಲ್ಲಾಧಿಕಾರಿ ಅದೇಶದಂತೆ ಮಕ್ಕಳನ್ನು ತರಗತಿಗೆ ಕರೆಸಿಕೊಳ್ಳದಂತೆ ನಾವು ಅತ್ಯಂತ ಸ್ಪಷ್ಟವಾಗಿ ತಿಳಿಸಿದ್ದೇವೆ ಎಂದು ಡಿಡಿಪಿಐ ತಿಳಿಸಿದ್ದಾರೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಘೋಷಣೆಯಾದ ಹಿನ್ನೆಲೆಯಲ್ಲಿ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಹೆಚ್ಚಿನ ತರಬೇತಿ ನೀಡಲು ಮುಖ್ಯೋಪಾಧ್ಯಾಯರು ಮುಂದಾಗಿದ್ದಾರೆ. ಆದರೆ ಸರ್ಕಾರ ಈ ವಿಶೇಷ ತರಗತಿಗೆ ಅವಕಾಶ ನೀಡಿಲ್ಲ….ಸದ್ಯ ತರಗತಿ ರದ್ದುಮಾಡಲಾಗಿದೆ ಎಂದು ಡಿಡಿಪಿಐ ಶೇಷಶಯನ ಕಾರಿಂಜ ಹೇಳಿದ್ದಾರೆ.