KARNATAKA
ಎಸ್ಎಸ್ಎಲ್ಸಿ ಪರಿಕ್ಷೆಗೆ ಸಮವಸ್ತ್ರ ಕಡ್ಡಾಯ – ಹಿಜಬ್ ವಿದ್ಯಾರ್ಥಿನಿಯರಿಗೆ ಶಾಕ್ ಕೊಟ್ಟ ರಾಜ್ಯ ಸರಕಾರ
ಬೆಂಗಳೂರು ಮಾರ್ಚ್ 26: ಹಿಜಬ್ ವಿವಾದ ಇನ್ನೂ ಜೀವಂತವಾಗಿರುವಾಗಲೇ ಎಸ್ಎಸ್ಎಲ್ ಸಿ ಪರೀಕ್ಷೆ ಬಂದಿದ್ದು, ರಾಜ್ಯ ಸರಕಾರ ಎಸ್ಎಸ್ಎಲ್ಸಿ ಪರೀಕ್ಷೆಗೆ ಆಗಮಿಸುವ ಎಲ್ಲ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಪ್ರಕಟಿಸಿದೆ.
ಮಾರ್ಚ್ 28ರಿಂದ ಎಪ್ರಿಲ್ 11ರ ವರೆಗೆ ಎಸ್ಎಲ್ಸಿ ಪರೀಕ್ಷೆ ನಡೆಸಲು ಈಗಾಗಲೇ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ನಿಗದಿತ ಸಮವಸ್ತ್ರ ಧರಿಸಿ ಕೇಂದ್ರಕ್ಕೆ ಬರಬೇಕು ಎಂದು ಅಧೀಕೃತ ಸುತ್ತೋಲೆ ಹೊರಡಿಸಿದೆ.
ವಿದ್ಯಾರ್ಥಿಗಳು ಸರ್ಕಾರ ನಿಗದಿಪಡಿಸಿದ ಸಮವಸ್ತ್ರ ಮಾತ್ರ ವಿದ್ಯಾರ್ಥಿಗಳು ಧರಿಸಿ ಬರಬೇಕು. ಹಾಗೆಯೇ ಖಾಸಗಿ ಶಾಲೆಗಳಲ್ಲಿ ಆಡಳಿತ ಮಂಡಳಿ ನಿಗದಿ ಪಡಿಸಿದ ಸಮವಸ್ತ್ರ ಧರಿಸಿ ಬರಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಿದೆ. 80 ಸಾವಿರಕ್ಕೂ ಹೆಚ್ಚು ಮುಸ್ಲಿಮ್ ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗಿದ್ದಾರೆ. 600-700 ವಿದ್ಯಾರ್ಥಿನಿಯರು ಇಲ್ಲಿಯವರೆಗೆ ಗೈರಾಗಿದ್ದಾರೆ. ಹೀಗಾಗಿ ಸಮವಸ್ತ್ರದಲ್ಲೇ ಪರೀಕ್ಷೆ ಬರೆಯಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.
You must be logged in to post a comment Login