Connect with us

    KARNATAKA

    ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುತ್ತಿದ್ದ ವಿಧ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

    ಮೈಸೂರು ಮಾರ್ಚ್ 28: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಮೈಸೂರಿನ ಟಿ. ನರಸಿಪುರ ತಾಲೂಕಿನ ಪರೀಕ್ಷಾ ಕೇಂದ್ರದಲ್ಲಿ ನಡೆಸಿದೆ.

    ಟಿ. ನರಸಿಪುರ ತಾಲೂಕಿನ ಅಕ್ಕೂರು ಗ್ರಾಮದ ಅನುಶ್ರೀ ಮೃತ ವಿದ್ಯಾರ್ಥಿನಿ ಅನುಶ್ರೀ ಮೃತ ಪಟ್ಟ ಬಾಲಕಿ. ಅವರು ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ಅನುಶ್ರೀ ತಾಲೂಕಿನ ವಿದ್ಯೋದಯ ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುವ ವೇಳೆ ಅನುಶ್ರೀ ಕುಸಿದು ಬಿದ್ದಿದ್ದಾಳೆ.

     

    ಪರೀಕ್ಷಾ ಕೇಂದ್ರದಲ್ಲಿದ್ದ ಸಿಬ್ಬಂದಿ ತಕ್ಷಣ ಟಿ ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮಗಳು ಪರೀಕ್ಷೆ ಬರೆಯಲು ಹೋಗಿದ್ದಾಳೆ. ಚೆನ್ನಾಗಿ ಪರೀಕ್ಷೆ ಬರೆದು ಬರುತ್ತಾಳೇ ಎಂಬ ನಿರೀಕ್ಷೆಯಲ್ಲಿದ್ದ ಪೋಷಕರಿಗೆ ಸಿಡಿಲು ಬಡಿತಂದಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply