Connect with us

    DAKSHINA KANNADA

    ವಿಟ್ಲ – ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಎಸ್ಎಸ್ಎಲ್ ಸಿ ವಿಧ್ಯಾರ್ಥಿ

    ವಿಟ್ಲ ಜನವರಿ 4: ಎಸ್ಎಸ್ಎಲ್ ಸಿ ಓದುತ್ತಿರುವ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ಡೆದಿದೆ.


    ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್ ಡಿಸೋಜ ಅವರ ಪುತ್ರ ಸಂದೀಪ್ ಅನಿಸಿತ್ ಡಿಸೋಜ(15) ಎಂದು ಗುರುತಿಸಲಾಗಿದೆ. ಈತ 10ನೇ ತರಗತಿ ಕಲಿಯುತ್ತಿದ್ದು, ಸರಿಯಾಗಿ ಶಾಲೆ ಹೋಗುತ್ತಿರಲಿಲ್ಲ. ನಿನ್ನೆ ರಾತ್ರಿ ಕೋಣೆಯಲ್ಲಿ ಮಲಗಿದ್ದ ಈತ ಬೆಳಗ್ಗೆ ಮನೆಯವರು ನೋಡಿದಾಗ ಮೃತದೇಹ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ದೂರಲಾಗಿದೆ.ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply