DAKSHINA KANNADA
ಪುತ್ತೂರು :ಇನ್ನೋವಾ ಕಾರು ಚಾಲಕನ ಮೇಲೆ ಹಲ್ಲೆ – ದೂರು ದಾಖಲು
ಪುತ್ತೂರು ಅಗಸ್ಟ್ 25: ಪೆಟ್ರೋಲ್ ಬಂಕ್ ಒಂದರಲ್ಲಿ ಇನ್ನೋವಾ ಕಾರು ಚಾಲಕ ಹಾಗೂ ತಂಡದ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಕಾರು ಚಾಲಕ ಗಾಯಗೊಂಡ ಘಟನೆ ದರ್ಬೆಯಲ್ಲಿ ನಡೆದಿದೆ.
ಗಾಯಗೊಂಡ ಇನ್ನೋವಾ ಚಾಲಕ ಕೆಮ್ಮಾಯಿ ನಿವಾಸಿ ರಾಧಾಕೃಷ್ಣ ಎಂದು ಗುರುತಿಸಲಾಗಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಘಟನೆಯಿಂದ ಇನ್ನೋವಾ ಕಾರಿಗೂ ಹಾನಿಯಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ರಾಧಾಕೃಷ್ಣ ಅವರಿಂದ ಪೊಲೀಸರು ಮಾಹಿತಿ ಸಂಗ್ರಹಿಸಿದ್ದು ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.ಘಟನೆಗೆ ಸಂಬಂಧಿಸಿ 6 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.
You must be logged in to post a comment Login