ಕರೂರು ಸೆಪ್ಟೆಂಬರ್ 27: ನಟ ರಾಜಕಾರಣಿ ವಿಜಯ್ ಅವರ ರಾಜಕೀಯ ರಾಲಿಯಲ್ಲಿ ಉಂಟಾದ ಕಾಲ್ತುಳಿತಕ್ಕೆ ಕನಿಷ್ಟ 20 ಮಂದಿ ಸಾವನಪ್ಪಿದ್ದಾರೆ ಎಂದು ವರದಿಯಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನ ಕರೂರಿನಲ್ಲಿ ಇಂದು ನಡೆದ ನಟ-ರಾಜಕಾರಣಿ ವಿಜಯ್ ದಳಪತಿ ರ್ಯಾಲಿಯಲ್ಲಿ ಈ ಕಾಲ್ತುಳಿತ ಉಂಟಾಗಿದೆ.

ಮೂವರು ಮಕ್ಕಳು ಮತ್ತು ವಯಸ್ಕರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಮೃತ ವಯಸ್ಕರು, ವಿಜಯ್ ಅವರ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಬೆಂಬಲಿಗರಾಗಿದ್ದರು. ರ್ಯಾಲಿಗಾಗಿ ಕನಿಷ್ಠ ಆರು ಗಂಟೆಗಳ ಕಾಲ ಕಾದಿದ್ದರು. ಸ್ಥಳಕ್ಕೆ ರ್ಯಾಲಿ ತಡವಾಗಿ ಬಂದಿತು. ಹೀಗಾಗಿ, ಹೆಚ್ಚಿನ ಜನಸಂದಣಿಯಾಗಿ ಕಾಲ್ತುಳಿತ ಸಂಭವಿಸಿದೆ.

ರಾಜ್ಯ ಆರೋಗ್ಯ ಸಚಿವ ಎಂ. ಸುಬ್ರಮಣಿಯನ್ ಕರೂರಿಗೆ ಧಾವಿಸಿದ್ದಾರೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೂರ್ ಜಿಲ್ಲಾ ಕಾರ್ಯದರ್ಶಿ ವಿ. ಸೆಂಥಿಲ್ಬಾಲಾಜಿ ಅವರಿಗೆ ಆದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ 500 ಜನರನ್ನು ದಾಖಲಿಸಲಾಗಿದ್ದು, ಕನಿಷ್ಠ 400 ಜನರನ್ನು ಕರೆತರಲಾಗುತ್ತಿರುವುದರಿಂದ ಈ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಡೇವಿಡ್ಸನ್ ದೇವಶಿರ್ವತಂ ತಿಳಿಸಿದ್ದಾರೆ.