KARNATAKA
ಹರ್ಷ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ
ಬೆಂಗಳೂರು, ಮಾರ್ಚ್ 03: ಶಿವಮೊಗ್ಗದಲ್ಲಿ ಫೆಬ್ರವರಿ 20ರಂದು ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಸ್ಥರಿಗೆ, ರಾಜ್ಯ ಸರ್ಕಾರ ಇದೀಗ 25 ಲಕ್ಷ ಪರಿಹಾರವನ್ನು ಘೋಷಿಸಿದೆ.
ಈ ಕುರಿತಂತೆ ಮಾಹಿತಿ ನೀಡಿದಂತ ಸಚಿವ ಈಶ್ವರಪ್ಪ ಅವರು, ಶಿವಮೊಗ್ಗ ನಗರದಲ್ಲಿ ಹತ್ಯೆಗೀಡಾದಂತ ಹರ್ಷ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ಪರಿಹಾರವನ್ನು ಘೋಷಿಸಿದೆ. ಮಾರ್ಚ್ 6ರಂದು ಹರ್ಷ ಮನೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ನಾನು ಹೋಗಿ ಪರಿಹಾರ ನೀಡುವುದಾಗಿ ತಿಳಿಸಿದರು.
ಅಂದಹಾಗೇ ಹರ್ಷ ಹತ್ಯೆಯ ಬಳಿಕ, ಉದ್ವಿಗ್ನ ಸ್ಥಿತಿ ಶಿವಮೊಗ್ಗ ನಗರದಲ್ಲಿ ಉಂಟಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಒಂದು ವಾರ ಶಾಲಾ-ಕಾಲೇಜು ಬಂದ್ ಕೂಡ ಮಾಡಲಾಗಿತ್ತು. ಈ ಬಳಿಕ ಶಾಲಾ-ಕಾಲೇಜುಗಳನ್ನು ಪುನರಾರಂಭಿಸಲಾಗಿತ್ತು. ಇದೀಗ ನಗರ ಸಹಜ ಸ್ಥಿತಿಗೆ ತಲುಪಿದೆ.
You must be logged in to post a comment Login