Connect with us

    BANTWAL

    ರಾಜ್ಯ ಸರಕಾರದ ಹಿಂದೂ ವಿರೋಧಿ ದೋರಣೆ: ಪ್ರಭಾಕರ ಪ್ರಭು ಖಂಡನೆ

    ಬಂಟ್ವಾಳ, ಅಕ್ಟೋಬರ್ 20: ಪಾರಂಪರಿಕ ಕಟ್ಟಡಗಳ ಸೌಂದರ್ಯಗಳಿಗೆ ಧಕ್ಕೆ ಉಂಟಾಗುತ್ತಿರುವುದರಿಂದ ಸೌಂದರ್ಯ ಕಾಪಾಡುವ ನೆಪದಲ್ಲಿ ವಿಧಾನಸೌಧ, ವಿಕಾಸಸೌಧ ಕಟ್ಟಡಗಳಲ್ಲಿ ಆಯುಧ ಪೂಜೆ ಸಂದರ್ಭದಲ್ಲಿ ಪವಿತ್ರ ಕುಂಕುಮ, ಅರಶಿನ,ಕುಂಬಳಕಾಯಿ, ಧಾರ್ಮಿಕ ರಂಗೋಲಿ ಬಳಸದಂತೆ ರಾಜ್ಯ ಸರಕಾರ ಹೊರಡಿಸಿದ ಸುತ್ತೋಲೆ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದ್ದು,ಕರ್ನಾಟಕ ಕಾಂಗ್ರೆಸ್ ಸರಕಾರದ ಈ ಧೋರಣೆಯನ್ನು ಬಿಜೆಪಿ ಮುಖಂಡ,ಬಂಟ್ವಾಳ ತಾ.ಪಂ.ಮಾಜಿ ಸದಸ್ಯ ಪ್ರಭಾಕರ ಪ್ರಭು ಖಂಡಿಸಿದ್ದಾರೆ.

    ಈ ಕುರಿತು‌ ಕರ್ನಾಟಕ ಸರಕಾರದ ಮುಖ್ಯ‌ಕಾರ್ಯದರ್ಶಿಯವರಿಗೆ ಲಿಖಿತ ಪತ್ರ ಬರೆದಿರುವ ಅವರು, ಈ ಆದೇಶವನ್ನು
    ತಕ್ಷಣದಿಂದ ವಾಪಾಸ್ ಪಡೆದು ಅನಾದಿಕಾಲದಿಂದಲೂ ಹಿಂದೂ ಧಾರ್ಮಿಕ ಪದ್ದತಿಯಂತೆ ಆಯುಧಪೂಜೆಯನ್ನು ಯಥಾವತ್ತಾಗಿ ಮುಂದುವರಿಸಲು ಅನುವು ಮಾಡಿಕೊಡಬೇಕು‌ ಎಂದು‌ ಆಗ್ರಹಿಸಿದ್ದಾರೆ.

    ಕುಂಕುಮ, ವಿಭೂತಿ ಇವಗಳೆಲ್ಲವನ್ನು ಹಿಂದೂ ಧರ್ಮದ ಆಚರಣೆಗಳಲ್ಲಿ ಬಳಕೆ ಮಾಡಿ ಬಳಿಕ ಭಕ್ತರಿಗೆ ಹಂಚುವ ಕ್ರಮ ಪುರಾತನದಿಂದಲೂ ನಡೆದು ಕೊಂಡು ಬಂದಿರುವ ಸಂಪ್ರದಾಯವಾಗಿದೆ. ಈ ಹಿನ್ನೆಲೆಯಲ್ಲಿ ಅದನ್ನು ನಿಷೇಧಿಸಿ ಆಯುಧ ಪೂಜೆ ನೆರವೇರಿಸಲು ಮುಂದಾಗಿರುವ ಸರಕಾರದ ಕ್ರಮ ಸಮಂಜಸವಲ್ಲ ಎಂದು ಪ್ರಭು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಇದೇ ರೀತಿ ಮುಂದುವರಿದರೆ ಕ್ಷುಲ್ಲಕ ನೆಪವೊಡ್ಡಿ ಆಯುಧ ಪೂಜೆಯನ್ನೇ ನಿಷೇಧಿಸಲು ಕಾಂಗ್ರೆಸ್‌ ಸರಕಾರ ಮುಂದಾದರೂ ಅಚ್ಚರಿಪಡಬೇಕಾಗಿಲ್ಲ,ಈ ನಿಟ್ಟಿನಲ್ಲಿ‌ಸಮಸ್ತ ಹಿಂದೂ ಸಮಾಜದ ಪರವಾಗಿ ಈ ಸುತ್ತೋಲೆಯನ್ನು ತಕ್ಷಣ ಹಿಂಪಡೆಯಲು ಕ್ರಮಕೈಗೊಳ್ಳುವಂತೆ ಪ್ರಭಾಕರ ಪ್ರಭು ಆಗ್ರಹಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply