LATEST NEWS
ಮುಜರಾಯಿ ಇಲಾಖೆಯ ಮಹತ್ವದ ಕಾರ್ಯಕ್ರಮ ಉಚಿತ ಸಾಮೂಹಿಕ ವಿವಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

ಮುಜರಾಯಿ ಇಲಾಖೆಯ ಮಹತ್ವದ ಕಾರ್ಯಕ್ರಮ ಉಚಿತ ಸಾಮೂಹಿಕ ವಿವಾಹದ ಆಮಂತ್ರಣ ಪತ್ರಿಕೆ ಬಿಡುಗಡೆ
ಮಂಗಳೂರು,ಜನವರಿ 10: ವಿಧಾನಸೌಧದಲ್ಲಿ ಸಪ್ತಪದಿ ಸಾಮೂಹಿಕ ವಿವಾಹದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.
ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯ ವತಿಯಿಂದ ರಾಜ್ಯದ ಬಡ ಜನರಿಗೆ ನಡೆಯುವ ಉಚಿತ ವಿವಾಹದ ಯೋಜನೆ ಇದಾಗಿದೆ.

ಈ ಆಮಂತ್ರಣ ಪತ್ರಿಕೆಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಬಿಡುಗಡೆಗೊಳಿಸಿದರು. ಮುಜರಾಯಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಈ ಯೋಜನೆ ಜಾರಿಗೆ ತರಲಾಗಿದ್ದು, ಇದರ ಸಂಪೂರ್ಣ ಮುತುವರ್ಜಿಯನ್ನು ಸಚಿವರು ವಹಿಸಲಿದ್ದಾರೆ.
ಸಭೆಯಲ್ಲಿ ವಿವಿಧ ಶಾಸಕರು ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು. ಏಪ್ರಿಲ್ 26 ರಂದು ರಾಜ್ಯದ ಮುಜರಾಯಿ ಇಲಾಖೆಗೆ ಸೇರಿದ ವಿವಿಧ ಎ ದರ್ಜೆಯ ದೇವಾಲಯಗಳಲ್ಲಿ ಉಚಿತ ಸಾಮೂಹಿಕ ಮದುವೆ ನಡೆಯಲಿದೆ.
ತಾಳಿ ಸಹಿತ ಚಿನ್ನಗಳು ಮತ್ತು ವಧುವಿಗೆ ಹತ್ತು ಸಾವಿರ ಹಾಗೂ ವರನಿಗೆ ಐದು ಸಾವಿರ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಸರ್ಕಾರದ ವತಿಯಿಂದಲೇ ನೀಡಲಾಗುತ್ತದೆ ಎಂದು ಮಾನ್ಯ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.