LATEST NEWS
ರಾಜ್ಯ ಮಟ್ಟದ ಕಬಡ್ಡಿ ಆಟಗಾರ ಸುಶಾಂತ್ ಶೆಟ್ಟಿ ನಿಧನ
ಕಾರ್ಕಳ, ಜುಲೈ 23: ಅನಾರೋಗ್ಯದ ಕಾರಣದಿಂದ ರಾಜ್ಯ ಮಟ್ಟದ ಕಬಡ್ಡಿ ಆಟಗಾರ, ಹೆಬ್ರಿ ತಾಲ್ಲೂಕು ಮುದ್ರಾಡಿಯ ಬಲ್ಲಾಡಿ ನಿವಾಸಿ ಸುಶಾಂತ್ ಶೆಟ್ಟಿ (32) ನಿನ್ನೆ ರಾತ್ರಿ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇವರು ಇಲಿ ಜ್ವರದಿಂದ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದ್ದು, ಉಡುಪಿಯ ಫೈನಾನ್ಸ್ ಒಂದರಲ್ಲಿ ಉದ್ಯೋಗಿಯಾಗಿದ್ದ ಸುಶಾಂತ್ ಶೆಟ್ಟಿಗೆ ಕೆಲ ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಜ್ವರ ತೀವ್ರಗೊಂಡ ಕಾರಣ ನಿನ್ನೆ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ವಿಪರೀತ ಜ್ವರದ ಕಾರಣ ಕಿಡ್ನಿ ಮತ್ತು ಲಿವರ್ನ ಮೇಲೂ ಪರಿಣಾಮ ಬೀರಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಸಾವಿಗೆ ನಿಖರವಾದ ಕಾರಣ ವೈದ್ಯಕೀಯ ಪರೀಕ್ಷೆಯಿಂದ ಇನ್ನಷ್ಟೇ ಬರಬೇಕಿದೆ. ಇವರು ತಂದೆ-ತಾಯಿ ಸಹೋದರ, ಸಹೋದರಿ, ಪತ್ನಿ ಹಾಗೂ ಒಂದು ವರ್ಷದ ಪುತ್ರನನ್ನು ಅಗಲಿದ್ದಾರೆ.
You must be logged in to post a comment Login