Connect with us

    KARNATAKA

    ರಾಜ್ಯದಲ್ಲಿ ಘೋರ ದುರಂತ ಸಂಭವಿಸಿದರೂ ಕೇರಳ ಪ್ರವಾಸದಲ್ಲಿ ಗೃಹಸಚಿವ ಡಾ. ಜಿ ಪರಮೇಶ್ವರ

    ರಾಜ್ಯದಲ್ಲಿ ಘೋರ ದುರಂತ ಸಂಭವಿಸಿದರೂ ಕೇರಳ ಪ್ರವಾಸದಲ್ಲಿ ಗೃಹಸಚಿವ ಡಾ. ಜಿ ಪರಮೇಶ್ವರ

    ಮಂಗಳೂರು ನವೆಂಬರ್ 24: ರಾಜ್ಯವೇ ಬೆಚ್ಚಿ ಬಿಳಿಸುವಂತಹ ಘೋರ ದುರಂತ ಮಂಡ್ಯದಲ್ಲಿ ಸಂಭವಿಸಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕು ಕನಗನಮರಡಿ ಬಳಿ ಖಾಸಗಿ ಬಸ್ ವಿಸಿ ನಾಲೆಗೆ ಉರುಳಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

    ಮುಖ್ಯಮಂತ್ರಿಗಳು ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ಸ್ಥಳಕ್ಕೆ ಧಾವಿಸಿದ್ದಾರೆ. ಆದರೆ ರಾಜ್ಯದ ಉಪಮುಖ್ಯಮಂತ್ರಿ ಗೃಹ ಸಚಿವ ಜಿ. ಪರಮೇಶ್ವರ ಮಾತ್ರ ಪಕ್ಕದ ಕೇರಳದ ಕಾಸರಗೋಡಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದಾರೆ.

    ಇಂದು ಮಧ್ಯಾಹ್ನ 12 ಗಂಟೆಗೆ ದುರಂತ ಸಂಭವಿಸಿದ್ದು ಇಲ್ಲಿಯವರೆಗೆ ಸುಮಾರು 30 ಮಂದಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿ ಘಟನಾ ಸ್ಥಳಕ್ಕೆ ಧಾವಿಸಿ ನೊಂದವರ ಕುಟುಂಬಗಳಿಗೆ ಸಾಂತ್ವಾನ ಹೇಳಿದ್ದಾರೆ.

    ಆದರೆ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರಾಗಿುವ ಪರಮೇಶ್ವರ್ ಮಾತ್ರ ರಾಜ್ಯದಲ್ಲಿ ಘೋರ ದುರಂತ ಸಂಭವಿಸಿದರೂ , ಪಕ್ಕದ ಕೇರಳ ಪ್ರವಾಸ ಕೈಗೊಂಡಿದ್ದಾರೆ. ಗೃಹ ಸಚಿವರಾಗಿ ದುರಂತ ಸಂಭವಿಸದ ಸ್ಥಳಕ್ಕೆ ತೆರಳ ಬೇಕಿದ್ದ ಜಿ ಪರಮೇಶ್ವರ್ ಕೇರಳದ ಕಾಸರಗೋಡಿನಲ್ಲಿ ಮುಸ್ಲಿಂ ಲೀಗ್ ಆಯೋಜಿಸಿರುವ ಕಾರ್ಯಕ್ರಮ ಒಂದರಲ್ಲಿ ಭಾಗ ವಹಿಸಲು ತೆರಳಿದ್ದಾರೆ.

    ಈ ನಡುವೆ ಕಾಸರಗೋಡಿಗೆ ತೆರಳಲು ಡಾ ಜಿ ಪರಮೇಶ್ವರ್ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕನಗನಮರಡಿ ಯಲ್ಲಿ ನಡೆದ ಘಟನೆ ದುರಾದೃಷ್ಟಕರ ಪ್ರಕರಣ. ಬಾಲಕ ಬಿಟ್ಟು 30 ಮಂದಿ ಸಾವನ್ನಪ್ಪಿದ್ದಾರೆ. ಉಳಿದ ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದರು.

    ಘಟನೆ ಬಳಿಕ ಬಸ್ ಚಾಲಕ ಓಡಿ ಹೋಗಿದ್ದಾನೆ ಎಂದು ಹೇಳಿದ ಅವರು ಡ್ರೈವರ್ ಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಈ ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು. ಅಗತ್ಯ ಬಿದ್ದರೆ ನಾಳೆ ಸ್ಥಳಕ್ಕೆ ಭೇಟಿ ನೀಡುತ್ತೇನೆ ಎಂದು ಅವರು ಸಮಜಾಯಿಷಿ ನೀಡಿದರು . ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಯಾವರು ನಿರ್ಧಾರ ಮಾಡುತ್ತಾರೆ ಎಂದು ಅವರು ತಿಳಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply