LATEST NEWS
ವಿದೇಶದಿಂದ ಬಂದವರೆಲ್ಲಾ ಕಡ್ಡಾಯವಾಗಿ 14 ದಿನ ಮನೆಯಲ್ಲೇ ಇರಿ: ಸಿಂಧೂ ಬಿ ರೂಪೇಶ್
ವಿದೇಶದಿಂದ ಬಂದವರೆಲ್ಲಾ ಕಡ್ಡಾಯವಾಗಿ 14 ದಿನ ಮನೆಯಲ್ಲೇ ಇರಿ: ಸಿಂಧೂ ಬಿ ರೂಪೇಶ್
ಮಂಗಳೂರು ಮಾ.16: ಕರೋನಾ ಕುರಿತಂತೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗರಿಷ್ಠ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ಸದ್ಯ ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಹೇಳಿದ್ದಾರೆ.
ನಿನ್ನೆ ಜಿಲ್ಲೆಯಲ್ಲಿ 377 ಜನರ ಸ್ಕ್ರೀನಿಂಗ್ ಮಾಡಲಾಗಿದೆ. ಇಲ್ಲಿವರೆಗೆ 106 ಜನ ಮನೆಯಲ್ಲೇ ನಿಗಾದಲ್ಲಿದ್ದಾರೆ. 11 ಸ್ಯಾಂಪಲ್ ಟೆಸ್ಟ್ಗೆ ಕಳುಹಿಸಲಾಗಿದೆ. ಇದರಲ್ಲಿ ಹಿಂದೆ ಕಳುಹಿಸಿದ 8 ಸ್ಯಾಂಪಲ್ ವಾಪಾಸು ಬಂದಿದ್ದು, 8 ಸ್ಯಾಂಪಲ್ ನೆಗೆಟಿವ್ ರಿಪೋರ್ಟ್ ಬಂದಿದೆ ಎಂದರು. ಇನ್ನು 9 ಜನ ಬೇರೆ ಬೇರೆ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಸಾಮಾನ್ಯ ಶೀತ ಜ್ವರಕ್ಕೆ ಆಸ್ಪತ್ರೆಗೆ ಸೇರಬೇಕೆಂದೆನು ಇಲ್ಲ. ದೂರ ಪ್ರಯಾಣ ಮಾಡಿದವರು ತಕ್ಷಣ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಬೇಕು. ವಿದೇಶದಿಂದ ಬಂದವರೆಲ್ಲಾ ಕಡ್ಡಾಯವಾಗಿ 14 ದಿನ ಮನೆಯಲ್ಲೇ ಇರಿ. ಹಾಸ್ಟೆಲ್ಗಳಿಂದ ಕೋವಿಡ್ ಫ್ರೀ ಸರ್ಟಿಫಿಕೆಟ್ ಕೇಳುತ್ತಿರುವ ಮಾಹಿತಿ ಬಂದಿದೆ. ಆದರೆ ಯಾರಿಗೂ ಈ ರೀತಿಯ ಸರ್ಟಿಫಿಕೆಟ್ ತನ್ನಿ ಎಂದು ಹೇಳುವ ಅವಕಾಶ ಇಲ್ಲ. ಸಾರ್ವಜನಿಕರು ಯಾವೂದೇ ರೀತಿಯ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಡಿಸಿ ಮನವಿ ಮಾಡಿದ್ದಾರೆ.
You must be logged in to post a comment Login