KARNATAKA
ಅಣ್ಣಾಮಲೈಯವರ ಅನುಭವದ ಬುತ್ತಿ ‘ಸ್ಟೆಪ್ಪಿಂಗ್ ಬಿಯಾಂಡ್ ಖಾಕಿ’ 18ರಂದು ಬಿಡುಗಡೆ
ಬೆಂಗಳೂರು, ಜನವರಿ 14: ಕರ್ನಾಟಕದ ಸಿಂಗಂ ಎಂದೇ ಪರಿಚಿತರಾಗಿರುವ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರ ಹೆಸರು ಕೇಳದವರೇ ಇಲ್ಲ. ಅಧಿಕಾರದಲ್ಲಿದ್ದಷ್ಟು ಸಮಯ ಒಂದಿಲ್ಲೊಂದು ಸುದ್ದಿಯಲ್ಲಿದ್ದ ಅಣ್ಣಾಮಲೈಯವರು ಪೋಲಿಸ್ ಇಲಾಖೆಯ ಅನುಭವದ ‘ಸ್ಟೆಪ್ಪಿಂಗ್ ಬಿಯಾಂಡ್ ಖಾಕಿ’ ಎಂಬ ಪುಸ್ತಕದೊಂದಿಗೆ ಬಂದಿದ್ದಾರೆ.
ನನ್ನ ಪ್ರಕಾರ ಪೊಲೀಸ್ ಕೆಲಸ ದೇವರಿಗೆ ಬಹಳ ಹತ್ತಿರವಾದ ಹಾಗೂ ಹೆಚ್ಚು ಜವಾಬ್ದಾರಿಯ ಕೆಲಸ. ಈ ಕೆಲಸದಲ್ಲಿ ನಾನು ಸಾಕಷ್ಟು ಜನರ ಪ್ರೀತಿ ಗಳಿಸಿದ್ದೇನೆ. ಆದರೆ ಕುಟುಂಬದ ಜತೆ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ ಎನ್ನುವ ಕಾರಣ ನೀಡಿ, ಕೆಲಸಕ್ಕೆ 2019ರಲ್ಲಿ ರಾಜೀನಾಮೆ ನೀಡಿರುವವರು ಅಣ್ಣಾಮಲೈ. ನಂತರ ಬಿಜೆಪಿಯಿಂದ ಪ್ರಭಾವಿತರಾಗಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಇವರ ಸುದೀರ್ಘ ವೃತ್ತಿ ಜೀವನದಲ್ಲಿ ಕಂಡು- ಕೇಳಿದ ತಮ್ಮ ಅನುಭವದ ಬುತ್ತಿಯನ್ನು ‘ಸ್ಟೆಪ್ಪಿಂಗ್ ಬಿಯಾಂಡ್ ಖಾಕಿ’ ಎಂಬ ಪುಸ್ತಕದಲ್ಲಿ ಅಣ್ಣಾಮಲೈ ತೆರೆದಿಟ್ಟಾರೆ. ಪೊಲೀಸ್ ಹುದ್ದೆಯ ಪಯಣದಲ್ಲಿ ನೆನಪಿನ ಬುತ್ತಿಯನ್ನು ಈ ಪುಸ್ತಕದಲ್ಲಿ ಬಿಚ್ಚಿಟ್ಟಿದ್ದಾರೆ.
ಬಾಲಕಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಹೇಗೆ ಮಾನವೀಯ ನೆಲೆಗಟ್ಟಿನಲ್ಲಿ ಅವರನ್ನು ತಂದುನಿಲ್ಲಿಸಿತು? ಕೆಲವೇ ವರ್ಷಗಳಲ್ಲಿ ತಾವು ಹೇಗೆ ‘ಕರ್ನಾಟಕದ ಸಿಂಗಂ’ ಆಗಿರುವುದು ಎಂಬ ಮಾಹಿತಿ ಈ ಪುಸ್ತಕದಲ್ಲಿ ಇದೆ ಎನ್ನಲಾಗಿದೆ.
ನಾಚಿಕೆ, ಸರಳ ಹಳ್ಳಿಯ ಹುಡುಗ ಸಾರ್ವಜನಿಕ ಸೇವೆಗೆ ಅರ್ಪಿಸಿಕೊಂಡದ್ದು ಹೇಗೆ? ಕರ್ನಾಟಕದಲ್ಲಿನ ಒಂದು ದಶಕದ ವೃತ್ತಿ ಜೀವನದಲ್ಲಿ ಅವರು ಇಷ್ಟೆಲ್ಲಾ ಗೌರವ ಗಳಿಸಲು ಹೇಗೆ ಸಾಧ್ಯವಾಯಿತು? ಅವರ ವೃತ್ತಿ ಜೀವನದಲ್ಲಿ ಎದುರಾದ ಪ್ರಶ್ನೆಗಳು ಏನು ಎಂಬುದರ ಜತೆಗೆ, ರಾಜಕಾರಣಿಗಳು ಕೆಟ್ಟವರೇ? ಮತ್ತು ಉತ್ತಮ ನಡತೆಯುಳ್ಳ ಜನರು ರಾಜಕೀಯ ಪ್ರವೇಶ ಮಾಡಲು ಭಯಪಡುವಂಥ ಸ್ಥಳವಾಗಿದೆಯೆ ಎಂಬಿತ್ಯಾದಿಯ ಬಗ್ಗೆ ಈ ಪುಸ್ತಕದಲ್ಲಿ ವಿವರಣೆ ನೀಡಲಾಗಿದೆ. ಈ ಪುಸ್ತಕ ಇದೇ 18ರಂದು ಬಿಡುಗಡೆಯಾಗಲಿದೆ.
Facebook Comments
You may like
-
ಖಾಸಗಿ ಬಸ್ ಚಾಲಕನ ಕೊಲೆ ಯತ್ನ – ಆರೋಪಿ ಬೈಕ್ ಸವಾರ ಆರೆಸ್ಟ್
-
ಖಾಸಗಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿ ಆರೆಸ್ಟ್ – ಪೊಲೀಸರ ಎದುರೇ ಕಪಾಳಕ್ಕೆ ಬಾರಿಸಿದ ಯುವತಿ
-
ನೂತನ ಸಚಿವರಿಗೆ ಖಾತೆ ಹಂಚಿಕೆ..ನೂತನ ಸಚಿವ ಅಂಗಾರರಿಗೆ ಮೀನುಗಾರಿಕೆ
-
ಸಿಟಿಬಸ್ ಚಾಲಕನ ಮೇಲೆ ಸೀಮೆ ಎಣ್ಣೆ ಸುರಿದು ಹಲ್ಲೆ – ಶೀಘ್ರ ಆರೋಪಿಗಳ ಬಂಧನಕ್ಕೆ ಒತ್ತಾಯ
-
ಧಾರ್ಮಿಕ ಕೇಂದ್ರಗಳಲ್ಲಿ ದುಷ್ಕರ್ಮಿಗಳ ವಿಕೃತಿ – ಪೊಲೀಸ್ ಆಯುಕ್ತರಿಂದ ಪರಿಶೀಲನೆ
-
ಕೊಣಾಜೆ ಮುಲಾರ ಗೋಪಾಲಕೃಷ್ಣ ಭಜನಾ ಮಂದಿರ ಭಗವಾ ಧ್ವಜದ ಮೇಲೆ ವಿಕೃತಿ ಮೆರೆದ ದುಷ್ಕರ್ಮಿಗಳು
You must be logged in to post a comment Login