Connect with us

LATEST NEWS

ವಿಧಾನಸೌಧದಲ್ಲಿ ಬೀದಿನಾಯಿ ಹಾವಳಿ – ಶಾಸಕರನ್ನು ಹೊರಗೆ ಕಳುಹಿಸುವ ಅಧಿಕಾರವಿದೆ. ಆದರೆ ಈ ಬೀದಿ ನಾಯಿಗಳನ್ನ ಕಳುಹಿಸುವಂತಿಲ್ಲ – ಖಾದರ್

ಮಂಗಳೂರು ಫೆಬ್ರವರಿ 03: ವಿಧಾನಸೌಧದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಅವುಗಳ ನಿಯಂತ್ರಣ ಬಗ್ಗೆ ಶೀಘ್ರದಲ್ಲಿ ಉನ್ನತಮಟ್ಟದ ಸಭೆ ನಡೆಯಲಿದೆ ಎಂದು ಸ್ಪೀಕರ್ ಖಾದರ್‌ ತಿಳಿಸಿದ್ದಾರೆ.


ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿಧಾನಸೌಧದ ಸುತ್ತಮುತ್ತ ಬೀದಿ ನಾಯಿಗಳ ಕಾಟ ಜಾಸ್ತಿಯಾಗಿದೆ. ವಿಧಾನಸೌಧದಲ್ಲಿ ಬೇಕಾಬಿಟ್ಟಿಯಾದಿ ತಿರುಗಾಡುತ್ತಿದ್ದು, ಪರ ವಿರೋಧ ದೂರುಗಳು ಬಂದಿದೆ ಎಂದರು. ನನಗೆ ಶಾಸಕರನ್ನು ವಿಧಾನಸಭೆಯಿಂದ ಹೊರಗೆ ಕಳುಹಿಸುವ ಅಧಿಕಾರವಿದೆ. ಆದರೆ ಈ ಬೀದಿ ನಾಯಿಗಳನ್ನು ಹೊರಗೆ ಕಳುಹಿಸುವಂತಿಲ್ಲ. ಅವುಗಳ ಹಕ್ಕುಗಳನ್ನು ಗೌರವಿಸಿ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ. ಪ್ರಾಣಿ ದಯಾ ಸಂಘದವರನ್ನೂ ಕರೆಸಿ ಸಮಾಲೋಚನೆ ನಡೆಸಿ ಕ್ರಮವಹಿಸುತ್ತೇವೆ ಎಂದರು.

ಇನ್ನು ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ ವಿಧಾನಸೌಧದ ಅವರಣದಲ್ಲಿ ಸಾಹಿತ್ಯ ಉತ್ಸವ, ಸಾಂಸ್ಕೃತಿಕ ಉತ್ಸವ, ಪುಸ್ತಕ ಮೇಳ, ಆಹಾರ ಮೇಳಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದರು.
ಸಾಹಿತಿಗಳು, ಬರಹಗಾರರು, ವಿದ್ವಾಂಸರನ್ನು ವಿಧಾನಸಭೆಗೆ ಹತ್ತಿರವಾಗಿಸುವ ಉದ್ದೇಶದಿಂದ ಸಾಹಿತ್ಯ ಉತ್ಸವ ಆಯೋಜಿಸಲಾಗುತ್ತಿದೆ. ಒಬ್ಬ ಸಾಹಿತಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದೇವೆ. ಸಾರ್ವಜನಿಕರಿಗೆ ಮುಕ್ತ ಪ್ರವೇಶ ಇರಲಿದೆ. ಭದ್ರತೆ ದೃಷ್ಟಿಯಿಂದ ವಿಶೇಷ ತಪಾಸಣಾ ವ್ಯವಸ್ಥೆ ಮಾಡುತ್ತೇವೆ. ಈ ಸಾಹಿತ್ಯ ಉತ್ಸವವನ್ನು ಪ್ರತಿ ವರ್ಷವೂ ಏರ್ಪಡಿಸಬೇಕು ಎಂಬುದು ನಮ್ಮ ಆಶಯ’ ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *