Connect with us

    KARNATAKA

    ಕ್ರಿಸ್ಮಸ್ ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ನಿರ್ಬಂಧ

    ಬೆಂಗಳೂರು ಡಿಸೆಂಬರ್ 18: ಕೊರೊನಾ ಹಿನ್ನಲೆ ಈ ಬಾರಿಯ ಹೊಸ ವರ್ಷಾಚರಣೆ ಹಾಗೂ ಕ್ರಿಸ್ಮಸ್ ಸಂಭ್ರಮಾಚರಣೆಗೆ ರಾಜ್ಯ ಸರಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಡಿಸೆಂಬರ್ 30ರಿಂದ 2021ರ ಜನವರಿ 2ರವರೆಗೆ ಕ್ಲಬ್, ಪಬ್, ರೆಸ್ಟೋರೆಂಟ್ ಸೇರಿ ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ, ವಸತಿ ಸಮುಚ್ಚಯಗಳಲ್ಲಿ ಹಾಗೂ ಜನ ಸೇರುವ ಸ್ಥಳಗಳಲ್ಲಿ ಸಾಮೂಹಿಕ ಕೂಟಗಳನ್ನು ನಿಷೇಧಿಸಿ ಆದೇಶ ಹೊರಡಿ ಸಿದೆ.


    ಇನ್ನು ಕ್ರಿಸ್​ಮಸ್​ ಆಚರಣೆ ಸಂದರ್ಭ ಚರ್ಚ್​ಗಳಲ್ಲಿ ಒಮ್ಮೆಲೆ ಹೆಚ್ಚು ಜನರು ಸೇರದಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹಾಗೂ ಕಡ್ಡಾಯ ಮಾಸ್ಕ್ ಧರಿಸುವ ಕುರಿತು ಆಯೋಜಕರು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಹಾಗೂ ಹಸ್ತಲಾಘನ ಮತ್ತು ಆಲಿಂಗನಕ್ಕೆ ಅವಕಾಶ ಇಲ್ಲ ಎಂದು ತಿಳಿಸಲಾಗಿದೆ.


    ಹೊಸ ವರ್ಷಾಚರಣೆ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ, ಮುಖ್ಯ ರಸ್ತೆಗಳಲ್ಲಿ ಸಾಮಾಜಿಕ ಅಂತರವಿಲ್ಲದೆಯೇ ಹೆಚ್ಚು ಜನರು ಸೇರುವಿಕೆ ಹಾಗೂ ಸಂಭ್ರಮಾಚರಣೆ ನಿಷೇಧಿಸಲಾಗಿದೆ. ಪ್ರತಿನಿತ್ಯದ ಸಾಮಾನ್ಯ ಕಾರ್ಯಚಟುವಟಿಕೆ ಕೈಗೊಳ್ಳಲು ಅವಕಾಶ ನೀಡಲಾಗಿದೆ.
    ಆಯ್ದ ರಸ್ತೆಗಳಿಗೆ ಸ್ಥಳೀಯ ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳು ಹೆಚ್ಚಿನ ನಿರ್ಬಂಧ ವಿಧಿಸಲು ಅವಕಾಶ ಕಲ್ಪಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply