Connect with us

    LATEST NEWS

    ಬಸ್ಸಿನಲ್ಲೇ ಮೃತಪಟ್ಟ ಇಂಜಿನಿಯರಿಂಗ್ ವಿಧ್ಯಾರ್ಥಿ

    ಬಸ್ಸಿನಲ್ಲೇ ಮೃತಪಟ್ಟ ಇಂಜಿನಿಯರಿಂಗ್ ವಿಧ್ಯಾರ್ಥಿ

    ಕುಂದಾಪುರ ಮಾರ್ಚ್ 9: ಬೆಂಗಳೂರಿನಿಂದ ಕುಂದಾಪುರಕ್ಕೆ ಆಗಮಿಸುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಬಸ್ಸಿನಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟ ಘಟನೆ ಶನಿವಾರ ರಾತ್ರಿ ವೇಳೆ ನಡೆದಿದೆ.

    ಮೃತ ವಿಧ್ಯಾರ್ಥಿಯನ್ನು ಬಳ್ಕೂರು ಗ್ರಾಮದ ದೇವಸ್ಥಾನಬೆಟ್ಟು ನಿವಾಸಿ ಎಚ್.ಎಸ್. ಶ್ರೀಧರ ಮೂರ್ತಿ ಎಂಬವರ ಮಗ ಸುಹಾಸ್ ಎಸ್.(22) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನಲ್ಲಿ ಕೊನೆಯ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು, ಶನಿವಾರ ರಾತ್ರಿ 9:45ರ ಸುಮಾರಿಗೆ ಊರಿಗೆ ಬರಲು ಬಸ್ಸಿನಲ್ಲಿ ಹೊರಟಿದ್ದರು. ಪ್ರಯಾಣದ ಮಧ್ಯೆ ಇವರು ಹೃದಯಾಘಾತದಿಂದ ಮೃತಪಟ್ಟಿರುವ ಸಾದ್ಯತೆ ಇದೆ ಎಂದು ಹೇಳಲಾಗಿದೆ. ಬೆಳಗ್ಗೆ 7:30ಕ್ಕೆ ಇವರು ಬಸ್ಸಿನಿಂದ ಇಳಿಯದಿರುವುದನ್ನು ಕಂಡ ನಿವಾರ್ಹಕ ಪರೀಕ್ಷಿಸಿದ ಮೃತಪಟ್ಟಿರುವುದು ತಿಳಿದುಬಂದಿದೆ.

    ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ಹೃದಯಘಾತ ಅಥವಾ ಇತರ ಯಾವುದೋ ಸಮಸ್ಯೆಯಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಸುಹಾಸ್ 5 ವರ್ಷವಿದ್ದಾಗ ಉಸಿರಾಟದ ಸಮಸ್ಯೆ ಇದ್ದು ಸ್ಟಂಟ್ ಅಳವಡಿಸಲಾಗಿತ್ತು. ಬಳಿಕ 20 ವರ್ಷದೊಳಗೆ ವೈದ್ಯಕೀಯ ಪರೀಕ್ಷೆ ನಡೆಸಲು ವೈದ್ಯರು ಸೂಚಿಸಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆ ಯಲ್ಲಿ ಅಸ್ವಾಭಾವಿಕ ಪ್ರಕರಣ ದಾಖಲಾಗಿದೆ

    Share Information
    Advertisement
    Click to comment

    You must be logged in to post a comment Login

    Leave a Reply