Connect with us

    DAKSHINA KANNADA

    ಕಬಕದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿಧ್ಯಾರ್ಥಿನಿ ಸಾವು

    ಪುತ್ತೂರು ಮೇ 25: ಕೆಲ ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ ಮಂಜುಶ್ರೀ (20) ಎಂದು ಗುರುತಿಸಲಾಗಿದೆ.


    ಕಬಕ ಸಮೀಪದ ಕೂವೆತ್ತಿಲದಲ್ಲಿ ಆಲ್ಟೋ ಕಾರು ಹಾಗೂ ಆಕ್ಟಿವಾ ನಡುವೆ ಅಪಘಾತದಲ್ಲಿ ಮಂಜುಶ್ರೀ ಗಂಭೀರ ಗಾಯಗೊಂಡಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply