Connect with us

    LATEST NEWS

    ಎಕ್ಸಾಂ ಟೆನ್ಶನ್ ಗೆ  ಕೆಎಸ್ ಆರ್ ಟಿಸಿ ಬಸ್ ಫ್ರೀ ಹತ್ತಿ  ತಿರಗಾಡಲು ಹೋದ ವಿಧ್ಯಾರ್ಥಿನಿ ದೀಪಿಕಾ – ಮಿಸ್ಸಿಂಗ್ ಆಗಿದ್ದವಳು ಕೊನೆಗೂ ಸುಳ್ಯದಲ್ಲಿ ಪತ್ತೆ

    ಮಂಗಳೂರು ಮೇ 10: ಸೆಮಿಸ್ಟರ್ ಪರೀಕ್ಷೆ ಬರೆದು ಮತ್ತೆ ವಾಪಾಸ್ ಕಾಲೇಜಿಗೆ ಬರದೆ ನಾಪತ್ತೆಯಾಗಿದ್ದ ವಿಧ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಮಾಡಿದ್ದಾರೆ.


    ಮಂಗಳೂರಿನ ರೋಶನಿ ನಿಲಯದಲ್ಲಿ ಎಂಎಸ್ ಕಲಿಯುತ್ತಿದ್ದ ವಿದ್ಯಾರ್ಥಿನಿ ದೀಪಿಕಾ ಮೇ 7 ರಂದು ಎರಡನೇ ಸೆಮಿಸ್ಟರ್ ಪರೀಕ್ಷೆ ಮುಗಿಸಿದ ಬಳಿಕ ನಾಪತ್ತೆಯಾಗಿದ್ದಳು. ದೀಪಿಕಾ ನಾಪತ್ತೆಯಾದ ಬಗ್ಗೆ ಮನೆಯವರು ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೀಪಿಕಾ ಪುಸ್ತಕ ಮತ್ತು ಮೊಬೈಲ್ ಅನ್ನು ಕಾಲೇಜಿನಲ್ಲಿ ಬಿಟ್ಟು ನಾಪತ್ತೆಯಾಗಿದ್ದರಿಂದ ಭಾರೀ ಕುತೂಹಲ ಉಂಟಾಗಿತ್ತು. ಪೊಲೀಸರು ಹುಡುಕಾಟ ನಡೆಸಿದರು ಯಾವುದೇ ಸುಳಿವು ದೊರಕಿರಲಿಲ್ಲ. ಬಳಿಕ ಮೇ 9 ರಂದು ಸುಳ್ಯದಲ್ಲಿ ವಿಧ್ಯಾರ್ಥಿನಿ ಪತ್ತೆಯಾಗುವುದರೊಂದಿಗೆ ಪ್ರಕರಣ ಸುಖಾಂತ್ಯ ಕಂಡಿದೆ.

    ಆದರೆ ಮೊಬೈಲ್ ಬಿಟ್ಟು ವಿಧ್ಯಾರ್ಥಿನಿ ಹೋಗಿದ್ದೆಲ್ಲಿಗೆ ಅನ್ನೊದೇ ಒಂದು ಇಂಟರೆಸ್ಟಿಂಗ್ ಸ್ಟೋರಿ. ಪೊಲೀಸರಿಗೆ ಯುವತಿ ತಿಳಿಸಿದ ಮಾಹಿತಿ ಪ್ರಕಾರ ಎಂಎಸ್ಸಿ ಪರೀಕ್ಷೆಯನ್ನು ಎದುರಿಸುವುದು ಕಷ್ಟವಾಗಿತ್ತು. ಅತಿಯಾದ ಒತ್ತಡದಿಂದಾಗಿ ಸ್ವಲ್ಪ ವಿಶ್ರಾಂತಿ ಪಡೆಯಬೇಕೆಂದು ನಿರ್ಧರಿಸಿ ಯುವತಿ ದೀಪಿಕಾ ಪರೀಕ್ಷೆ ಮುಗಿಸಿದ ಆಕೆ ಕಾಲೇಜಿನಿಂದ ಹೊರಬಂದು ಕಂಕನಾಡಿಯಲ್ಲಿ ಚಿಕ್ಕಮಗಳೂರಿಗೆ ತೆರಳುವ ಬಸ್ಸನ್ನು ಹತ್ತಿದ್ದಾಳೆ. ಕೆಎಸ್ಆರ್ ಟಿಸಿ ಬಸ್ಸಿನಲ್ಲಿ ಉಚಿತ ಇರುವುದರಿಂದ ನೇರವಾಗಿ ಚಿಕ್ಕಮಗಳೂರಿಗೆ ತೆರಳಿದ್ದು, ಅಲ್ಲಿಂದ ಮೈಸೂರಿಗೆ ಹೋಗುವ ಬಸ್ ಹತ್ತಿದ್ದಾಳೆ. ಮತ್ತೆ ಅಲ್ಲಿಂದ ಮಡಿಕೇರಿಗೆ ಬಸ್ಸಿನಲ್ಲಿ ಬಂದು ಬಸ್ ನಿಲ್ದಾಣದಲ್ಲಿ ತಮಿಳು ಮಾತನಾಡುವ ಹುಡುಗಿ ಒಬ್ಬಳು ಪರಿಚಯ ಆಗಿದ್ದು ಆಕೆಯೊಂದಿಗೆ ಬುಧವಾರ ಸುಳ್ಯಕ್ಕೆ ಬಂದಿದ್ದಾಳೆ. ಸುಳ್ಯದ ಅರಂತೋಡಿನಲ್ಲಿ ಆಕೆಯ ಮನೆಯಲ್ಲಿ ರಾತ್ರಿ ಉಳಿದುಕೊಂಡಿದ್ದಾಳೆ.

    ಮೂಲತ: ತಮಿಳುನಾಡಿನವಳಾಗಿದ್ದರಿಂದ ದೀಪಿಕಾಗೆ ತಮಿಳು ಬಿಟ್ಟರೆ ಕನ್ನಡ ಸರಿಯಾಗಿ ಮಾತನಾಡಲು ಬರುತ್ತಿರಲಿಲ್ಲ. ದೀಪಿಕಾ ತಂದೆ ತಾಯಿ ಮಂಗಳೂರಿನಲ್ಲಿ ನೆಲೆಸಿದ್ದಾರೆ. ಸುಳ್ಯದಲ್ಲಿ ಹುಡುಗಿ ಇರುವ ಬಗ್ಗೆ ಅವರ ಮನೆಯವರು ಪರಿಚಯದ ಮಂಗಳೂರಿನ ಪೊಲೀಸರಿಗೆ ತಿಳಿಸಿದ್ದಾರೆ. ಅದರಂತೆ ಪಾಂಡೇಶ್ವರ ಠಾಣೆಯ ಪೊಲೀಸರು ಅರಂತೋಡು ತೆರಳಿ ಆಕೆಯನ್ನು ಮಂಗಳೂರಿಗೆ ಕರೆತಂದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply