Connect with us

DAKSHINA KANNADA

ಪುತ್ತೂರು – ವಿಷ ಸೇವಿಸಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವು…!!

ಪುತ್ತೂರು, ಜೂ 3 : ವಿಷ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನಪ್ಪಿದ ಘಟನೆ ನಿನ್ನೆ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಬಲ್ನಾಡು ಬ೦ಗಾರಡ್ಕ ದಿ.ಕಮಲಾಕ್ಷ ರ ಪುತ್ರಿ ವಂಶಿ ಬಿ.ಕೆ (17ವ) ಎಂದು ಗುರುತಿಸಲಾಗಿದೆ.


ಈಕೆ ಈಗಷ್ಟೇ ಎಸ್.ಎಸ್.ಎಲ್.ಸಿ ಮುಗಿಸಿ ಮುಂದೆ ಪಿಯುಸಿ ವ್ಯಾಸಂಗ ಮಾಡಲು ಕಾಲೇಜು ಸೇರುವ ಸಿದ್ಧತೆಯಲ್ಲಿದ್ದರು. ಮೃತ ವಂಶಿ ಬಿ.ಕೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆದಿದ್ದರು. ವಿದ್ಯಾಭಾರತಿ ಆಯೋಜಿಸಿದ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.

ಇತ್ತೀಚೆಗೆ ಅವರು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣವೇ ವಿದ್ಯಾರ್ಥಿನಿಯನ್ನು ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಚೇತರಿಸಿಕೊಂಡು ಮನೆಗೆ ಹೋಗಿದ್ದರು. ಬಳಿಕ ಮತ್ತೆ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು ತೀವ್ರ ಅಸ್ವಸ್ಥರಾಗಿದ್ದರು. ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರು ತಾಯಿ ಬಿ.ಎಸ್ ಜಯಲತಾ ಮತ್ತು ಸಹೋದರನನ್ನು ಅಗಲಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *