LATEST NEWS
ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ ಗೆ ಪ್ರವಾಸ ಬಂದಿದ್ದ ಮೂವರು ಯುವಕರು ನೀರುಪಾಲು
ಉಡುಪಿ ಎಪ್ರಿಲ್ 07: ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ನೀರುಪಾಲಾದ ಘಟನೆ ನಡೆದಿದೆ.
ಮೃತರನ್ನು ಕೇರಳದ ಕೊಟ್ಟಾಯಂನ ಮಂಗಳ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದ್ದು. ಉಡುಪಿ ಜಿಲ್ಲೆಗೆ 42 ವಿದ್ಯಾರ್ಥಿಗಳು ಹಾಗೂ ಇಬ್ಬರು ಉಪನ್ಯಾಸಕರು ಆಗಮಿಸಿದ್ದು, ಮಲ್ಪೆ ಸೈಂಟ್ ಮೇರಿಸ್ ದ್ಪೀಪಕ್ಕೆ ಆಗಮಿಸಿದ್ದರು.
ಎಲ್ಲರೂ ಮಲ್ಪೆ ತೋನ್ಸೆಪಾರ್ ದ್ವೀಪದ ಬಳಿ ನೀರಾಟ ಆಡುತ್ತಿದ್ದರು. ಈ ಪೈಕಿ ಅಲೆನ್ ರೆಜಿ, ಅಮಲ್, ಅನಿಲ್ ಎಂಬ ವಿದ್ಯಾರ್ಥಿಗಳು ನೀರಲ್ಲಿ ಮುಳುಗಿದ್ದಾರೆ. ಕೂಡಲೇ ಅವರನ್ನು ಹೊರಗೆ ಎಳೆತಂದು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಯಿತ್ತಾದರೂ ಬದುಕಲಿಲ್ಲ. ಮತ್ತೊರ್ವನ ಶೋದ ಕಾರ್ಯ ಮುಂದುವರೆದಿದೆ.
You must be logged in to post a comment Login