Connect with us

BELTHANGADI

ಎರ್ಮಾಯಿ ಫಾಲ್ಸ್ ನಲ್ಲಿ ಮುಳುಗಿ ವಿಧ್ಯಾರ್ಥಿ ಸಾವು…!!

ಬೆಳ್ತಂಗಡಿ ಡಿಸೆಂಬರ್ 04: ಮಿತ್ತಬಾಗಿಲು ಗ್ರಾಮದ ಎರ್ಮಾಯಿ ಫಾಲ್ಸ್ ಸಮೀಪದ ಏಳೂವರೆ ಹಳ್ಳದ ಕಲ್ಲಂಡ ಬಳಿ ಶನಿವಾರ ಸ್ನಾನಕ್ಕೆ ಇಳಿದಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.


ಮೃತ ವಿಧ್ಯಾರ್ಥಿಯನ್ನು ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ ಭಂಡಾರಿ ಅವರ ಪುತ್ರ, ಉಜಿರೆಯ ಪದವಿಪೂರ್ವ ಕಾಲೇಜೊಂದರ ವಿದ್ಯಾರ್ಥಿ ವಿವೇಕ್ (17) ಎಂದು ಗುರುತಿಸಲಾಗಿದೆ.

ಶನಿವಾರ ಮಧ್ಯಾಹ್ನ ನಂತರ ಕಾಲೇಜಿಗೆ ರಜೆ ಇದ್ದುದರಿಂದ ಆರೇಳು ಸ್ನೇಹಿತರ ಜೊತೆ ಎರ್ಮಾಯಿ ಫಾಲ್ಸ್‌ಗೆ‌ ಹೋಗಿ, ತೊಟ್ಲಾಯಿ ಗುಂಡಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಸಮಯ ಈ ಘಟನೆ ನಡೆದಿದೆ. ವಿವೇಕ್ ನೀರಿನಲ್ಲಿ ಮುಳುಗಿದ್ದು ಜೊತೆಯಲ್ಲಿದ್ದವರು ರಕ್ಷಣೆ ಮಾಡಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ತಕ್ಷಣ ಜೊತೆಯಲ್ಲಿದ್ದವರು ಬೊಬ್ಬೆ ಹೊಡೆದಾಗ ಸ್ಥಳೀಯರೊಬ್ಬರ ಸಹಕಾರದಲ್ಲಿ ವಿದ್ಯಾರ್ಥಿಯನ್ನು ಮೇಲೆತ್ತಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ ಅದರೆ ಅಷ್ಟೋತ್ತಿಗಾಗಲೇ ಸಾವನ್ನಪ್ಪಿರುವ ಬಗ್ಗೆ ತಿಳಿದು ಬಂದಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *