DAKSHINA KANNADA
ಕಾಲೇಜು ವಿದ್ಯಾರ್ಥಿನಿಯನ್ನು ಏಳು ಬಾರಿ ಚೂರಿಯಿಂದ ಇರಿದು ಕೊಂದ ವಿದ್ಯಾರ್ಥಿ
ಕಾಲೇಜು ವಿದ್ಯಾರ್ಥಿನಿಯನ್ನು ಏಳು ಬಾರಿ ಚೂರಿಯಿಂದ ಇರಿದು ಕೊಂದ ವಿದ್ಯಾರ್ಥಿ
ಸುಳ್ಯ ಫೆಬ್ರವರಿ 20: ಕಾಲೇಜಿನ ವಿಧ್ಯಾರ್ಥಿನಿಯೊಬ್ಬಳನ್ನು ಅದೇ ಕಾಲೇಜಿನ ವಿಧ್ಯಾರ್ಥಿಯೊಬ್ಬ ಹಾಡು ಹಗಲೇ ಚೂರಿ ಇರಿದು ಕೊಲೆ ಮಾಡಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಸುಳ್ಯ ಎನ್ಎಂಸಿ ಕಾಲೇಜಿನ ದ್ವಿತೀಯ ಬಿಎಸ್ಸಿ ಪದವಿ ವಿದ್ಯಾರ್ಥಿನಿ ಅಕ್ಷತಾ ಕೊಲೆಯಾದವರು. ಇದೇ ಕಾಲೇಜಿನ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ, ನೆಲ್ಲೂರು ಕೆಮ್ರಾಜೆ ನಿವಾಸಿ ಚಂದ್ರಶೇಖರ್ ಎಂಬವರ ಪುತ್ರ ಕಾರ್ತಿಕ್ ಕೊಲೆ ಆರೋಪಿಯಾಗಿದ್ದಾನೆ.
ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾದ ಶಾಂತಿ ನಗರ ನಿವಾಸಿಯಾಗಿದ್ದ ಅಕ್ಷತಾ ಇಂದು ಸಂಜೆ ಕಾಲೇಜಿನಿಂದ ಬರುತ್ತಿದ್ದಾಗ ರೋಟರಿ ಶಾಲೆಯ ಬಳಿ ಆರೋಪಿ ಕಾರ್ತಿಕ್ ಈ ಕೃತ್ಯ ಎಸಗಿದ್ದಾನೆನ್ನಲಾಗಿದೆ. ಅಕ್ಷತಾಳಿಗೆ ಏಳು ಬಾರಿ ಚೂರಿಯಿಂದ ಇರಿದ ಆರೋಪಿ ತಾನು ಕೂಡಾ ಕೈಯನ್ನು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದನೆನ್ನಲಾಗಿದೆ.
ಗಂಭೀರ ಸ್ಥಿತಿಯಲ್ಲಿ ಅಕ್ಷತಾರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿಮಧ್ಯೆ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.
ಕೈಗೆ ಗಾಯ ಮಾಡಿಕೊಂಡಿರುವ ಕಾರ್ತಿಕ್ನನ್ನು ಸ್ಥಳೀಯ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಘಟನೆಗೆ ಸ್ಪಷ್ಟ ಕಾರಣ ತಿಳಿದಿಲ್ಲವಾದರೂ, ಪ್ರೇಮ ವೈಫಲ್ಯದಿಂದ ಆಗಿರಬೇಕೆಂದು ಶಂಕಿಸಲಾಗಿದೆ. ಈ ಬಗ್ಗೆ ಸುಳ್ಯ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ
You must be logged in to post a comment Login