LATEST NEWS
ಸುರತ್ಕಲ್ – ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಾಲಕ
ಸುರತ್ಕಲ್ ಫೆಬ್ರವರಿ 14: 7ನೇ ತರಗತಿ ಕಲಿಯುತ್ತಿರುವ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.
ಸುರತ್ಕಲ್ ಸಮೀಪದ ಕೃಷ್ಣಾಪುರದ ಖಾಸಗಿ ಶಾಲಾ ವಿದ್ಯಾರ್ಥಿ ಕಾಟಿಪಳ್ಳದ ಹರ್ಷಿತ್ (13) ಮೃತ ವಿದ್ಯಾರ್ಥಿ. ಪ್ರತೀ ವಾರದ ಕೊನೆಯಲ್ಲಿ ಸೂರಿಂಜೆಯಲ್ಲಿರುವ ತನ್ನ ಅಜ್ಜನ ಮನೆಗೆ ಹೋಗುವುದು ವಾಡಿಕೆ. ಈ ಬಾರಿಯೂ ಶಾಲೆ ಮುಗಿಸಿ ಶನಿವಾರ ತೆರಳಿದ್ದ ಹರ್ಷಿತ್ ರವಿವಾರ ಮುಂಜಾನೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅನಿರೀಕ್ಷಿತವಾಗಿ ಯಾವುದೋ ಕಾರಣಕ್ಕೆ ಮನನೊಂದು ಈ ಕೃತ್ಯ ಎಸಗಿರುವ ಸಾಧ್ಯತೆಯಿದೆ ಎಂದು ಈತನ ತಂದೆ ಸುಧಾಕರ ದೇವಾಡಿಗ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
You must be logged in to post a comment Login